ಎ.ಎಸ್.ಪಾಟೀಲ್ ನಡಹಳ್ಳಿ 
ರಾಜಕೀಯ

ಪ್ರತ್ಯೇಕ ರಾಜ್ಯ ನನ್ನ ಉದ್ದೇಶ ಅಲ್ಲ: ಶಾಸಕ ನಡಹಳ್ಳಿ ಯೂಟರ್ನ್

ಪ್ರತ್ಯೇಕ ರಾಜ್ಯದ ಬೇಡಿಕೆ ಹಾಗೂ ಉತ್ತರ ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಮ್ಮದೇ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ...

ಬೆಳಗಾವಿ: ಪ್ರತ್ಯೇಕ ರಾಜ್ಯದ ಬೇಡಿಕೆ ಹಾಗೂ ಉತ್ತರ ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಮ್ಮದೇ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಇದೀಗ ಯೂಟರ್ನ್ ಹೊಡಿದ್ದಾರೆ.

ಈ ಕುರಿತು ಇಂದು ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ ದೇವರಹಿಪ್ಪರಗಿಯ ಶಾಸಕ, ಪ್ರತ್ಯೇಕ ರಾಜ್ಯ ನನ್ನ ಉದ್ದೇಶ ಅಲ್ಲ. ತಾರತಮ್ಯದ ವಿರುದ್ಧ ಹಾಗೂ ಅಖಂಡ ಕರ್ನಾಟಕದ ಪರವಾಗಿ ನನ್ನ ಹೋರಾಟ ಎಂದಿದ್ದಾರೆ.

ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರೋಧಿ ಅಲ್ಲ. ನನ್ನ ಮಾತಿನಿಂದ ಸಿಎಂಗೆ ನೋವಾಗಿದ್ದರೆ ಕ್ಷಮೆ ಕೇಳುವೆ ಎಂದು ನಡಹಳ್ಳಿ ಹೇಳಿದ್ದಾರೆ.

ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿದ್ದ ಶಾಸಕ ನಡಹಳ್ಳಿ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದ ಅಮಾನತು ಮಾಡಲಾಗಿದೆ. ಅಲ್ಲದೆ ನಡಹಳ್ಳಿಯನ್ನು ಪಕ್ಷದಿಂದಲೇ ಉಚ್ಚಾಟಿಸುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಡಹಳ್ಳಿ ಪ್ರತ್ಯೇಕ ರಾಜ್ಯ ನನ್ನ ಉದ್ದೇಶ ಅಲ್ಲ, ತಾರತಮ್ಯದ ವಿರುದ್ಧ ನನ್ನ ಹೋರಾಟ ಎಂದು ಹೇಳುವ ಮೂಲಕ ವಿವಾದವನ್ನು ತಣ್ಣಗಾಗಿಸುವ ಯತ್ನ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!