ಎ.ಎಸ್.ಪಾಟೀಲ್ ನಡಹಳ್ಳಿ 
ರಾಜಕೀಯ

ಪ್ರತ್ಯೇಕ ರಾಜ್ಯ ನನ್ನ ಉದ್ದೇಶ ಅಲ್ಲ: ಶಾಸಕ ನಡಹಳ್ಳಿ ಯೂಟರ್ನ್

ಪ್ರತ್ಯೇಕ ರಾಜ್ಯದ ಬೇಡಿಕೆ ಹಾಗೂ ಉತ್ತರ ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಮ್ಮದೇ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ...

ಬೆಳಗಾವಿ: ಪ್ರತ್ಯೇಕ ರಾಜ್ಯದ ಬೇಡಿಕೆ ಹಾಗೂ ಉತ್ತರ ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಮ್ಮದೇ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಇದೀಗ ಯೂಟರ್ನ್ ಹೊಡಿದ್ದಾರೆ.

ಈ ಕುರಿತು ಇಂದು ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ ದೇವರಹಿಪ್ಪರಗಿಯ ಶಾಸಕ, ಪ್ರತ್ಯೇಕ ರಾಜ್ಯ ನನ್ನ ಉದ್ದೇಶ ಅಲ್ಲ. ತಾರತಮ್ಯದ ವಿರುದ್ಧ ಹಾಗೂ ಅಖಂಡ ಕರ್ನಾಟಕದ ಪರವಾಗಿ ನನ್ನ ಹೋರಾಟ ಎಂದಿದ್ದಾರೆ.

ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರೋಧಿ ಅಲ್ಲ. ನನ್ನ ಮಾತಿನಿಂದ ಸಿಎಂಗೆ ನೋವಾಗಿದ್ದರೆ ಕ್ಷಮೆ ಕೇಳುವೆ ಎಂದು ನಡಹಳ್ಳಿ ಹೇಳಿದ್ದಾರೆ.

ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿದ್ದ ಶಾಸಕ ನಡಹಳ್ಳಿ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದ ಅಮಾನತು ಮಾಡಲಾಗಿದೆ. ಅಲ್ಲದೆ ನಡಹಳ್ಳಿಯನ್ನು ಪಕ್ಷದಿಂದಲೇ ಉಚ್ಚಾಟಿಸುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಡಹಳ್ಳಿ ಪ್ರತ್ಯೇಕ ರಾಜ್ಯ ನನ್ನ ಉದ್ದೇಶ ಅಲ್ಲ, ತಾರತಮ್ಯದ ವಿರುದ್ಧ ನನ್ನ ಹೋರಾಟ ಎಂದು ಹೇಳುವ ಮೂಲಕ ವಿವಾದವನ್ನು ತಣ್ಣಗಾಗಿಸುವ ಯತ್ನ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT