ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ವಸತಿ ಸಚಿವ ಅಂಬರೀಶ್ ಸಾಧನೆ ಶೂನ್ಯ: ಸಿಎಂ

ವಸತಿ ಸಚಿವ ಅಂಬರೀಶ್ ಅವರ ಸಾಧನೆ ಶೂನ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ವಸತಿ ಸಚಿವ ಅಂಬರೀಶ್ ಅವರ ಸಾಧನೆ ಶೂನ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕ ಜಿ.ಎಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಇಂದು ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿದ ಸಿಎಂ, ಪ್ರಸಕ್ತ ಆಯವ್ಯಯಕ್ಕೆ ಸಂಬಂಧಿಸಿದಂತೆ ಅಂಬರೀಶ್ ಅವರ ಸಾಧನೆ ಶೂನ್ಯ ಎಂದು ಹೇಳಿದರು.

ವಿಧಾನಸಭೆಗೆ ಈ ವರ್ಷದ ಆಯವ್ಯಯದಲ್ಲಿ ನೀಡಿದ್ದ ಭರವಸೆಗಳ ಅನುಷ್ಠಾನದ ವಿವರ ನೀಡಿದ ಸಿದ್ದರಾಮಯ್ಯ, 2015-16ನೇ ಸಾಲಿನಲ್ಲಿ ವಸತಿ ಇಲಾಖೆಗೆ ನೀಡಿದ್ದ 3, 818 ಕೋಟಿ ರುಪಾಯಿ ಪೈಕಿ, ಒಂದೇ ಒಂದು ಪೈಸೆ ಖರ್ಚಾಗಿಲ್ಲ ಎಂದರು. ಅಲ್ಲದೆ ಮೇ ತಿಂಗಳ ಅಂತ್ಯದವರೆಗೂ ವಸತಿ ಇಲಾಖೆ ಯಾವುದೇ ವೆಚ್ಚ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಚಿಕ್ಕಮಗಳೂರು ಜಿಲ್ಲೆ ತರೀಕರೆ ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಭರವಸೆಗಳ ಅನುಷ್ಠಾನದ ವಿವರ ಸೇರಿದಂತೆ ಮೂರು ಪ್ರಶ್ನೆಗಳನ್ನು ಕೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT