ವಿಧಾನಮಂಡಲ ಅಧಿವೇಶನ 
ರಾಜಕೀಯ

ರೈತರ ಕಡೆಗಣಿಸಿದರೆ ಸಾವಿನ ಭಾಗ್ಯ

ರೈತರ ಸರಣಿ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಝಾಡಿಸಿದ ಪ್ರತಿಪಕ್ಷಗಳು, ಕೈಗೊಳ್ಳಬೇಕಾದ ಕ್ರಮಗಳ ವಿಸ್ತೃತವಾಗಿ ಸಲಹೆ ನೀಡಿದ ಪ್ರಸಂಗ ವಿಧಾನಪರಿಷತ್ತಿನ ಎರಡನೇ ಅವಧಿಯಲ್ಲಿ ನಡೆಯಿತು...

ವಿಧಾನಪರಿಷತ್ತು: ರೈತರ ಸರಣಿ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಝಾಡಿಸಿದ ಪ್ರತಿಪಕ್ಷಗಳು, ಕೈಗೊಳ್ಳಬೇಕಾದ ಕ್ರಮಗಳ ವಿಸ್ತೃತವಾಗಿ ಸಲಹೆ ನೀಡಿದ ಪ್ರಸಂಗ ವಿಧಾನಪರಿಷತ್ತಿನ ಎರಡನೇ ಅವಧಿಯಲ್ಲಿ ನಡೆಯಿತು.

ಕೃಷಿ ಸಚಿವರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿಲ್ಲ, ಸಹಕಾರ ಸಚಿವರು ಸಮಸ್ಯೆಗೆ ಪರಿಹಾರ ಹುಡುಕುವ ಬದಲು ಮುಖ್ಯಮಂತ್ರಿಗಳು ಹೋದಲ್ಲೆಲ್ಲಾ ಸೆಕ್ಯುರಿಟಿ ಗಾರ್ಡ್ ರೀತಿ ಪಕ್ಕ ನಿಂತಿರುತ್ತಾರೆ, ತೋಟಗಾರಿಕೆ ಸಚಿವರು ಸರ್ಕಾರವನ್ನು ಸಮರ್ಥಿಸಿಕೊಳ್ಳುವ ಲಾಯರ್ ಗಿರಿ ಮಾಡಿಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರುಗಳಂತೂ ತಮ್ಮ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿಲ್ಲ ಎಂದು ಬಿಜೆಪಿ ಸದಸ್ಯ ಅಶ್ವತ್ಥ ನಾರಾಯಣ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ರೈತರ ಆತ್ಮಹತ್ಯೆ ನಿರಂತರವಾಗಿ ನಡೆಯುತ್ತಿರುವಾಗ ಕೃಷಿ, ತೋಟಗಾರಿಕೆ, ಸಕ್ಕರೆ, ಸಹಕಾರ ಸಚಿವರು ಒಂದು ಕಡೆ ಕುಳಿತು ಸಭೆ ನಡೆಸಿಲ್ಲ. ಇನ್ನು ಕೃಷಿ, ತೋಟಗಾರಿಕೆ, ಪಶು ಹೀಗೆ ಅನೇಕ ವಿಶ್ವವಿದ್ಯಾಲಯಗಳಿವೆ. ಇಲ್ಲಿರುವ ಕುಲಪತಿಗಳು, ಸಂಶೋಧಕರು ಸರ್ಕಾರದ ಸಂಬಳ, ಭತ್ಯೆ ಪಡೆಯುತ್ತಾರೆ ವಿನಃ ರೈತನ ಸಾವಿನ ಬಗ್ಗೆ ಕೊಂಚವಾದರೂ ಚಿಂತಿಸುತ್ತಿಲ್ಲ. ನಾವೇನಾದರೂ ಮಾತನಾಡಿದರೆ, ಕಂಪ್ಯೂಟರ್ ನಲ್ಲಿ ಬತ್ತ ಬೆಳೆಯಲಾಗುವುದಿಲ್ಲ ಎಂದು ಟೀಕಿಸುತ್ತಾರೆ ಎಂದು ಹೇಳಿದರು.

ಸರ್ಕಾರ ಏನಾದರೂ ಭಾಗ್ಯ ಯೋಜನೆ ತರಲಿ ರೈತನನ್ನು ಕಡೆಗಣಿಸಿದರೆ ಸಾವಿನ ಭಾಗ್ಯ ನೀಡಿದಂತಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರ ನೀಡಬೇಕಾದ ಪ್ರೋತ್ಸಾಹಧನ ಕಳೆದ ಆರು ತಿಂಗಳಿಂದ ಬಿಡುಗಡೆಯಾಗಿಲ್ಲ. ಇನ್ನೊಂದೆಡೆ ಹಾಲಿನ ಉತ್ಪಾದನೆ ಹೆಚ್ಚುತ್ತಿದ್ದಂತೆ ಹಾಲಿನ ದರ ಕೂಡ ಕಡಿಮೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದರು.

ಕೃಷಿ ಸಚಿವರಿಗೆ ಸ್ಟೇಟ್ ದರ್ಜೆ ಸ್ಥಾನಮಾನವಿದೆ, ಅವರಿಗೆ ಕ್ಯಾಬಿನೆಟ್ ಸ್ಥಾನಕೊಟ್ಟಿಲ್ಲ. ಈ ನೋವಿನಲ್ಲೇ ಅವರಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರು ಕಿಚಾಯಿಸಿದರು. ಹಿರಿಯ ಸದಸ್ಯ ಕೆ.ಬಿ. ಶಾಣಪ್ಪ ಮಾತನಾಡಿ, ರೈತನ ಸಾವು ಒಂದು ಪಿಡುಗಾಗಿದೆ. ಇಂತಹ ಸಂದರ್ಭದಲ್ಲಿ ಸ್ಪಂದಿಸದ ರಾಜ ರಾಜನೇ ಅಲ್ಲ ಎಂದು ಮುಖ್ಯಮಂತ್ರಿಯವರನ್ನು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT