ಸದನದಲ್ಲಿ ಸಿದ್ದರಾಮಯ್ಯ 
ರಾಜಕೀಯ

ಮತಕ್ಕೆ ಮುನ್ನವೇ ಜೆಡಿಎಸ್ ಸಭಾತ್ಯಾಗ: ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಜೆಡಿಎಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯ ತಿರಸ್ಕೃತಗೊಂಡಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಜೆಡಿಎಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯ ತಿರಸ್ಕೃತಗೊಂಡಿದೆ.

ಅವಿಶ್ವಾಸ ನಿರ್ಣಯ ಮಂಡಿಸಿದ್ದ ಜೆಡಿಎಸ್ ನಿರ್ಣಯವನ್ನು ಮತಕ್ಕೆ ಹಾಕುವ ಮುನ್ನವೇ ಸಭಾತ್ಯಾಗ ಮಾಡುವ ಮೂಲಕ ಹೊಸ ಸಂಪ್ರದಾಯ ಸೃಷ್ಟಿಸಿದ್ದು ಕಾಂಗ್ರೆಸ್ ನವರು ಈ ಬೆಳವಣಿಗೆಯನ್ನು ಪಲಾಯನವಾದ ಎಂದು ಬಣ್ಣಿಸಿದ್ದಾರೆ.

ಜೆಡಿಎಸ್ ಶಾಸಕಾಂಗಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ನೇತೃತ್ವದ ಸರ್ಕಾರ ಈ ಸದನದ ವಿಶ್ವಾಸ ಉಳಿಸಿಕೊಂಡಿದೆ. ಮುಂದೆಯೂ ಉಳಿಸಿಕೊಳ್ಳುತ್ತದೆ. ಕರ್ನಾಟಕ ರಾಜ್ಯದ ಜನರ ವಿಶ್ವಾಸವೂ ನಮ್ಮ ಸರ್ಕಾರದ ಮೇಲಿದೆ ಎಂದು ಘೋಷಿಸಿದರು.

ಸಿ.ಎಂ ಉತ್ತರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ನಿಮಹಿರುವ ವಿಶ್ವಾಸ ಮುಂದುವರೆಯಲಿ. ನಿಮ್ಮ ಉತ್ತರದಿಂದ ಸಮಗೆ ಸಮಾಧಾನ ಇಲ್ಲ. ಆದ್ದರಿಂದ ಸಭಾತ್ಯಾಗ ಮಾಡುತ್ತಿದ್ದೇವೆ ಎಂದು ಹೇಳಿ ಹೊರ ನಡೆದರು.

ಅವಿಶ್ವಾಸ ನಿರ್ಣಯ ಮಂಡಿಸಿದವರೇ ಸಭಾತ್ಯಾಗ ಮಾಡಿದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಸದಸ್ಯರೆಲ್ಲಾ ಇದು ಪಲಾಯನವಾದ ಶೇಮ್, ಶೇಮ್... ಎಂದು ಮೂದಲಿಸಿದರು. ನಂತರ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿದ ನಿರ್ಣಯವನ್ನು ಓದಿ ಅದನ್ನು ಮತಕ್ಕೆ ಹಾಕಿ ಧ್ವನಿಮತದಿಂದ ಅದು ತಿರಸ್ಕೃಉತಗೊಂಡಿದೆ ಎಂದು ಪ್ರಕಟಿಸಿ ಪ್ರಕ್ರಿಯೆ ಮುಗಿಸಿದರು.

ಸಿಎಂ ತಂತ್ರಗಾರಿಕೆ: ಜೆಡಿಎಸ್ ನ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ಸರ್ಕಾರ ಉತ್ತರ ನೀದಬೇಕಿತ್ತು. ಮೊದಲು ಮಾತನಾಡಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂತ್ರಗಾರಿಕೆ ಮೆರೆದರು. ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರಿಂದ ವಿವರಣೆ ಕೊಡಿಸಿದರು. ಜುಗಲ್ ಬಂದಿ ರೀತಿಯಲ್ಲಿ ಕುಮಾರಸ್ವಾಮಿ ಹಾಗೂ ಶಿವಕುಮಾರ್ ಮಾತುಕತೆ ನಡೆಯಿತು.

ಸಿದ್ಧಾಂತ, ಆಚಾರ ವಿಚಾರವೂ ಇಲ್ಲದ ಜೆಡಿಎಸ್ ನ ಅವಿಶ್ವಾಸ ನಿರ್ಣಯ ಸಿನಿಮಾ ಕಥೆಯಂತಿದೆ ಎಂದು ಲೇವಡಿ ಮಾಡಿದರು. ಕೊಟ್ಟ ಕುದುರೆಯನ್ನು ಏರದೆ ಬೇರೆ ಕುದುರೆ ಬೇಕು ಎಂಬುವವರು ವೀರನೂ ಅಲ್ಲ ಶೂರನೂ ಅಲ್ಲ ಎಂದು ಅಲ್ಲಮಪ್ರಭುವಿನ ಮಾತು ಕೇಳಿ ಕುಮಾರಸ್ವಾಮಿ ಅವರನ್ನು ಶಿವಕುಮಾರ್ ಜಾರಿದರು. ಕುಮಾರಸ್ವಾಮಿ ಅವರನ್ನು ಬಿಟ್ಟರೆ ಜೆಡಿಎಸ್ ನ 40 ಶಾಸಕರಲ್ಲಿ 39 ಶಾಸಕರಿಗೆ ಸಿದ್ದರಾಮಯ್ಯ ಅವರಲ್ಲಿ ವಿಶ್ವಾಸ ಇದೆ ಎಂದರು. ಡಿ.ಕೆ ಶಿವಕುಮಾರ್ ಹೇಳಿಕೆಗೆ ಜೆಡಿಎಸ್ ಪ್ರತಿರೋಧ ಇರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT