ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ 
ರಾಜಕೀಯ

ಉಡಾಫೆ ಉತ್ತರ ಬೇಡ: ಸಿಎಂಗೆ ಶೆಟ್ಟರ್ ತಾಕೀತು

ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿ ಇನ್ನೂ ಇದ್ದಿದ್ದರೆ ತಿಂಗಳ ಕಾಲ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿದ್ದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿ...

ಬೆಳಗಾವಿ: ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿ ಇನ್ನೂ ಇದ್ದಿದ್ದರೆ ತಿಂಗಳ ಕಾಲ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿದ್ದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.

ಈಗ 20 ದಿನ ಬೆಳಗಾವಿ ಅಧಿವೇಶನಕ್ಕೆ ಆಗ್ರಹಿಸುತ್ತಿರುವ ಜಗದೀಶ ಶೆಟ್ಟರ್ ಅವರೇ 20 ದಿನ ಅಧಿವೇಶನ ನಡೆಸಿಲ್ಲ ಎಂಬ ಮುಖ್ಯಮಂತ್ರಿಗಳ ಟೀಕೆಗೆ ಪ್ರತಿಕ್ರಿಯಿಸಿದ ಅವರು,  ಮುಖ್ಯಮಂತ್ರಿಗಳು ಇಂತಹ ಉಡಾಫೆ ಉತ್ತರ ನೀಡುವುದು ಸರಿಯಲ್ಲ. ನಾನು ಮುಖ್ಯಮಂತ್ರಿಯಾಗಿದ್ದು 10 ತಿಂಗಳು ಮಾತ್ರ. ನನ್ನ ಅವಧಿಯಲ್ಲಿಯೇ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದೇನೆ, ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ಉದ್ಘಾಟನೆ ಮಾಡಿದ ಬಳಿಕ ಅಧಿವೇಶನವನ್ನು ನಡೆಸಿದ್ದೇನೆ. 2 ವರ್ಷದಿಂದ ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯ ಕನಿಷ್ಠ ಒಂದು ತಿಂಗಳಾದರೂ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಬೇಕು ಎಂದರು.

ಜೂ.29 ರಿಂದ 10 ದಿನಗಳ ಕಾಲ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರ ಉದ್ದೇಶಿಸಿದೆ. ಬೆಳಗಾವಿಯಲ್ಲಿ 10 ದಿನ, ಬೆಂಗಳೂರಿನಲ್ಲಿ 10 ದಿನ ಹೀಗೆ ಮಾಡುವುದರ ಬದಲು ಬೆಳಗಾವಿಯಲ್ಲಿಯೇ 20 ದಿನಗಳ ಕಾಲ ಅಧಿವೇಶನ ನಡೆಸಬೇಕು ಎಂದು ಆಗ್ರಹಿಸಿದರು. ಭಾನುವಾರ ಬೆಳಗಾವಿ ತಾಲೂಕಿನ ಬಡಾಲಅಂಕಲಗಿ ಗ್ರಾಮಕ್ಕೆ ಭೇಟಿ ನೀಡಿದ ಶೆಟ್ಟರ್, ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತ ಗುರುನಾಥ ಚಾಪಗಾಂವಿ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರ ಜತೆ ಮಾತನಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT