ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಬಾಂಧವ್ಯ ಕೊರತೆ ಮೂಡಿಸಿದೆ ಶಂಕೆ: ಎಚ್‍ಡಿಕೆ

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಬಾಂಧವ್ಯ ಕೊರತೆ ಎದ್ದು ಕಾಣುತ್ತಿದ್ದು, ಇದರಿಂದ ಸರ್ಕಾರದಲ್ಲಿ ದೊಡ್ಡ ಲೋಪಗಳಿರುವ ಶಂಕೆ ಮೂಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಬಾಂಧವ್ಯ ಕೊರತೆ ಎದ್ದು ಕಾಣುತ್ತಿದ್ದು, ಇದರಿಂದ ಸರ್ಕಾರದಲ್ಲಿ ದೊಡ್ಡ ಲೋಪಗಳಿರುವ ಶಂಕೆ ಮೂಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಕೈಗೊಳ್ಳುವ ಎಲ್ಲಾ ನಿರ್ಧಾರಗಳನ್ನೂ ರಾಜ್ಯಪಾಲ ವಿ.ಆರ್. ವಾಲಾ ಅವರು ವಾಪಸ್ ಕಳುಹಿಸುತ್ತಿದ್ದಾರೆ. ಹಾಗೆಯೇ ಈಗ ಕುಲಪತಿಗಳ ನೇಮಕ ವಿಚಾರದಲ್ಲಿ ಅವರು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಅಂದರೆ ಸರ್ಕಾರದ ತೀರ್ಮಾನಗಳಿಗೆ ರಾಜ್ಯಪಾಲರು ಸಹಮತ ನೀಡುತ್ತಿಲ್ಲ ಎನ್ನುವುದು ಇಲ್ಲಿ ವ್ಯಕ್ತವಾಗುತ್ತದೆ. ಕೆಪಿಎಸ್‍ಎಸ್ಸಿಗೆ ಹೊಸ ನೇಮಕ, ಬಿಬಿಎಂಪಿ ವಿಭಜನೆ- ಹೀಗೆ ಅನೇಕ ತೀರ್ಮಾನಗಳನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.

ಅಂದರೆ ಸರ್ಕಾರ ಕೈಗೊಂಡ ತೀರ್ಮಾನಗಳು ಸರಿಯಾಗಿಲ್ಲ ಎಂದರ್ಥ. ಇಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ವಿಶ್ವಾಸದ ಕೊರತೆ ಇರುವುದು ಎದ್ದುಕಾಣುತ್ತಿದೆ ಎಂದು ಕುಮಾರ ಸ್ವಾಮಿ ಹೇಳಿದರು. ಲೋಕಾ ಯುಕ್ತದಲ್ಲೇ ಭ್ರಷ್ಟಾಚಾರ ನಡೆದಿರುವ ಬಗ್ಗೆ ಅಲ್ಲಿನ ಹಿರಿಯ ಅಧಿಕಾರಿಯೇ ಪತ್ರ ಬರೆದಿದ್ದಾರೆ. ಈ ಸಂಸ್ಥೆ ಮೇಲೆ ನಂಬಿಕೆ ದೂರವಾಗುತ್ತಿದೆ. ಇಷ್ಟೆಲ್ಲಾ ಆದರೂ ಸರ್ಕಾರ ಮೌನವಹಿಸಿದ್ದು, ಕೇವವ ಸಣ್ಣ ಅಧಿಕಾರಿಗಳನ್ನು ಮಾತ್ರ ಶಿಕ್ಷಿಸಿ ಏನೂ ಆಗಿಯೇ ಇಲ್ಲ ಎಂದು ಮರೆ ಮಾಡುತ್ತಿದೆ ಎಂದು ದೂರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT