ಕರ್ನಾಟಕ ರಾಜ್ಯ ವಕೀಲ ಪರಿಷತ್ ಉಗ್ರಪ್ಪ 
ರಾಜಕೀಯ

ಉಗ್ರಪ್ಪಗೆ ಶೋಕಾಸ್ ನೋಟಿಸ್ ಸಂಭವ

ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಅವರು ವೃತ್ತಿ ದುರ್ನಡತೆ ಎಸಗಿದ್ದಾರೆಂದು ಆರೋಪಿಸಿ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಕೀಲ ಪರಿಷತ್ ಉಗ್ರಪ್ಪ ಅವರಿಗೆ ಶೋಕಾಸ್ ನೋಟಿಸ್ ನೀಡುವುದಾಗಿ ತಿಳಿಸಿದೆ...

ಬೆಂಗಳೂರು:  ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಅವರು ವೃತ್ತಿ ದುರ್ನಡತೆ ಎಸಗಿದ್ದಾರೆಂದು ಆರೋಪಿಸಿ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಕೀಲ ಪರಿಷತ್ ಉಗ್ರಪ್ಪ ಅವರಿಗೆ ಶೋಕಾಸ್ ನೋಟಿಸ್ ನೀಡುವುದಾಗಿ ತಿಳಿಸಿದೆ.

ಮಾಜಿ ಪ್ರಧಾನಿ ದೇವೇಗೌಡ ಮತ್ತು ಅವರ ಕುಟುಂಬದ ವಿರುದ್ಧ ವಿ.ಎಸ್. ಉಗ್ರಪ್ಪ ಮಾಡಿರುವ ಆರೋಪ ಖಂಡಿಸಿ ಬೆಂಗಳೂರು ಜೆಡಿಎಸ್ ಕಾನೂನು ಘಟಕ ಉಗ್ರಪ್ಪ ವಿರುದ್ಧ ವೃತ್ತಿ ದುರ್ನಡತೆ ಎಸಗಿದ್ದಾರೆಂದು ಜೂ.5ರಂದು ರಾಜ್ಯ ವಕೀಲ ಪರಿಷತ್‍ನಲ್ಲಿ ದೂರು ದಾಖಲಿಸಿತ್ತು. ವಿವರಣೆ ನೀಡುವಂತೆ ಕರ್ನಾಟಕ ರಾಜ್ಯ ವಕೀಲ ಪರಿಷತ್ ಉಗ್ರಪ್ಪ ಅವರಿಗೆ ಗುರುವಾರ ಶೋಕಾಸ್ ನೋಟಿಸ್ ಜಾರಿ ಮಾಡುವುದಾಗಿ ವಕೀಲ ಪರಿಷತ್‍ನ ಅಧ್ಯಕ್ಷ ಪಿ.ಪಿ. ಹೆಗ್ಡೆ ತಿಳಿಸಿದ್ದಾರೆ.

`ಗೌಡರ ಕುಟುಂಬದ ಆಸ್ತಿ ಈ ಮೊದಲು ಎಷ್ಟಿತ್ತು ಎನ್ನುವುದು ನನಗೆ ತಿಳಿದಿದೆ. ನಾನು ಅವರ ವಕೀಲನಾಗಿ ಚುನಾವಣೆ ಸಂದರ್ಭದಲ್ಲಿ ಪ್ರಮಾಣಪತ್ರ ಸಿದ್ಧಪಡಿಸುತ್ತಿದ್ದೆ. ಹೀಗಾಗಿ ಇದ್ದಕ್ಕಿದ್ದಂತೆ ಆಗಾಧ ಪ್ರಮಾಣದ ಆಸ್ತಿ ಎಲ್ಲಿಂದ ಬಂತು ಎನ್ನುವುದನ್ನು ತಿಳಿಸಲಿ' ಎಂದು ಉಗ್ರಪ್ಪ ಆರೋಪ ಹೊರಿಸಿದ್ದಾರೆಂದು ಪತ್ರಿಕೆಯೊಂದರಲ್ಲಿ ಪ್ರಕಟವಾಗಿತ್ತು. ಈ ಹೇಳಿಕೆಯಿಂದ ಅವರು ದೇವೇಗೌಡರ ಕಕ್ಷಿದಾರರಾಗಿದ್ದಾರೆಂದು ತಿಳಿದುಬರುತ್ತದೆ. ವೃತ್ತಿಯಲ್ಲಿ ವಕೀಲರಾಗಿರುವ ಇವರು ಈ ರೀತಿ ಹೇಳಿಕೆ ನೀಡುವ ಮೂಲಕ ಭಾರತೀಯ ಸಾಕ್ಷಿ ಕಾಯ್ದೆ 1872 ಸೆಕ್ಷನ್ 126ರ ಉಲ್ಲಂಘನೆ ಆಗಿದ್ದು, ವೃತ್ತಿಯಲ್ಲಿ ದುರ್ನಡತೆ ಎಸಗಿದ್ದಾರೆ. ಅದರ ಪ್ರಕಾರ, ಕಕ್ಷಿದಾರರು ನೀಡುವ ಮಾಹಿತಿಯನ್ನು ಬಹಿರಂಗಪಡಿಸಬಾರದು ಎಂದಿದೆ. ಆದರೆ, ಉಗ್ರಪ್ಪ ಅವರು ಮಾಹಿತಿ ಸೋರಿಕೆ ಮಾಡುವ ಮೂಲಕ ವೃತ್ತಿಗೆ ಅಪಮಾನ ಎಸಗಿದ್ದಾರೆ. ಆದ್ದರಿಂದ ಉಗ್ರಪ್ಪ ವಿರುದ್ಧ ವಕೀಲ ಕಾಯ್ದೆ 1951, ಸೆಕ್ಷನ್ 35ರ ಪ್ರಕಾರ ಕಾನೂನು ರೀತಿ ಶಿಸ್ತು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ವಿವರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT