ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ 
ರಾಜಕೀಯ

ಸಿಎಂ ಮೊಸಳೆ ಕಣ್ಣೀರು: ಶೆಟ್ಟರ್ ವ್ಯಂಗ್ಯ

ಬೆಳಗಾವಿ ಅಧಿವೇಶನಕ್ಕೆ ಒಂದು ವಾರ ಬಾಕಿ ಉಳಿದಿದೆ ಎನ್ನುತ್ತಿರುವಾಗ ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದು ರೈತರ ಪರ ಮೊಸಳೆ ಕಣ್ಣೀರು ಸುರಿಸುವ ನಾಟಕಕ್ಕೆ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಟೀಕಿಸಿದ್ದಾರೆ...

ಹುಬ್ಬಳ್ಳಿ: ಬೆಳಗಾವಿ ಅಧಿವೇಶನಕ್ಕೆ ಒಂದು ವಾರ ಬಾಕಿ ಉಳಿದಿದೆ ಎನ್ನುತ್ತಿರುವಾಗ ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದು ರೈತರ ಪರ ಮೊಸಳೆ ಕಣ್ಣೀರು ಸುರಿಸುವ ನಾಟಕಕ್ಕೆ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಟೀಕಿಸಿದ್ದಾರೆ.

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಾವಿರರು ಕೋಟಿ ಪಾವತಿಸಬೇಕಿದೆ. ಕಾರ್ಖಾನೆ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ರೈತರಿಗೆ ಹಣ ನೀಡುವಂತೆ ಒತ್ತಾಯಿಸಿದರೂ ಸುಮ್ಮನೆ ಕುಳಿತಿದ್ದ ಸರ್ಕಾರ ಇದೀಗ ಅಧಿವೇಶನ ಹೊಸ್ತಿಲಲ್ಲ ಕಾಟಾಚಾರಕ್ಕೆ ಎಂಬಂತೆ ಸಭೆ ಕರೆದಿದೆ. ಈ ಸಭೆಯಿಂದ ಏನೂ ಪ್ರಯೋಜನವಿಲ್ಲ. ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಬೇಕಾಗುತ್ತದೆ ಎನ್ನುವ ಕಾರಣಕ್ಕಾಗಿಯೇ 24ರಂದು ಮುಖ್ಯಮಂತ್ರಿ ಸಭೆ ಕರೆದಿದ್ದಾರೆ ಎಂದು ಶೆಟ್ಟರ್ ಹರಿಹಾಯ್ದಿದ್ದಾರೆ.

ಸೇಡಿನ ರಾಜಕಾರಣ:
ರಾಜ್ಯ ಸರ್ಕಾರ ಬಿಜೆಪಿ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಸುತ್ತ ಸೇಡಿನ ರಾಜಕಾರಣ ನಡೆಸುತ್ತಿದೆ ಎಂದು ಶೆಟ್ಟರ್ ಆರೋಪಿಸಿದರು. ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ ಹೋರಾಟ ಕೈಗೊಂಡರೆ ಸಾಕು, ಸರ್ಕಾರ ಅಧಿಕಾರ ಬಲದಿಂದ ಹೋರಾಟ ಹತ್ತಿಕುವ ಪ್ರಯತ್ನ ಮಾಡುತ್ತಿದೆ. ಸಿಬಿಐ, ಎಸ್‍ಐಟಿ ಹೆಸರಲ್ಲಿ ಶಾಸಕ ಆನಂದ ಸಿಂಗ್ ಅವರನ್ನು ಬಂಧಿಸಲಾಗುತ್ತಿದೆ.

 ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದಟಛಿ ದೂರು ದಾಖಲಿಸಲಾಗಿದೆ. ಯಲ್ಲಾಲಿಂಗನ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟಿಸಿದರೆ ಬಿಜೆಪಿಯ ಮಾಜಿ ಸಂಸದ ವಿರೂಪಾಕ್ಷ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನ್ಮೂಲಕ ಬಿಜೆಪಿಯನ್ನು ಬೆದರಿಸುವ ಕೀಳು ರಾಜಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಇಳಿದಿದೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT