44 ರಾಜ್ಯ ಹೆದ್ದಾರಿ ಮೇಲ್ದರ್ಜೆಗೆ (ಸಾಂದರ್ಭಿಕ ಚಿತ್ರ) 
ರಾಜಕೀಯ

44 ರಾಜ್ಯ ಹೆದ್ದಾರಿ ಮೇಲ್ದರ್ಜೆಗೆ

ರಾಜ್ಯದ 8162.70 ಕಿ.ಮೀ ಉದ್ದದ 44 ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಭೂಸಾರಿಗೆ ಮಂತ್ರಾಲಯಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು...

ವಿಧಾನ ಪರಿಷತ್ತು: ರಾಜ್ಯದ 8162.70 ಕಿ.ಮೀ ಉದ್ದದ 44 ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಭೂಸಾರಿಗೆ ಮಂತ್ರಾಲಯಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಸೋಮಣ್ಣ ಹಾಗೂ ಕೆ.ಪ್ರತಾಪಚಂದ್ರ ಶೆಟ್ಟಿ ಅವರ ಪ್ರಶ್ನೆಗೆ ಸಚಿವರು ಮಾಹಿತಿ ನೀಡಿದರು. ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸುವಂತೆ ಕೇಂದ್ರದೊಂದಿಗೆ ನಿರಂತರವಾಗಿ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಅಲ್ಲದೆ, ಈಗಾಗಲೇ ತಾವು ಕೇಂದ್ರ ಸಾರಿಗೆ ಸಚಿವರನ್ನು ಭೇಟಿ ಮಾಡಿ ಈ ಕುರಿತು ವಿನಂತಿಸಿರುವುದಾಗಿ ತಿಳಿಸಿದ ಅವರು, ರಾಜ್ಯದ ವಿವಿಧೆಡೆ ನಿರ್ಮಾಣಗೊಂಡಿರುವ ಹೆದ್ದಾರಿಗಳಲ್ಲಿ ಇನ್ನೂ 20-28 ವರ್ಷಗಳ ಕಾಲ ಶುಲ್ಕ ಆಕರಣೆ ಮುಂದುವರಿಯಲಿದೆ ಎಂದೂ ಹೇಳಿದರು.

ಮೇಲ್ದರ್ಜೆಗೇರಿಸಲು ಉದ್ದೇಶಿಸಲಾದ ರಸ್ತೆಗಳು: ಚನ್ನರಾಯಪಟ್ಟಣ-ಹೊಳೆನರಸೀಪುರ ಮಾರ್ಗದ ಮೂಲಕ ಸಕಲೇಶಪುರ ಸೇರುವ ಮೈಸೂರು-ಕನಕಪುರ-ಆನೇಕಲ್ ರಸ್ತೆ (187ಕಿ.ಮೀ.), ಬೆಂಗಳೂರು ಹೊರವಲಯ ರಸ್ತೆ (194ಕಿ.ಮೀ.), ಕೊರಟಗೆರೆ- ತುಮಕೂರು ಕುಣಿಗಲ್-ಹುಲಿಯೂರು ದುರ್ಗ-ಮಳವಳ್ಳಿ ರಸ್ತೆ (140ಕಿ.ಮೀ.), ಬೆಳಗಾವಿ-ಬಾಗಲಕೋಟೆ-ಮೆಹಬೂಬ ನಗರ (336 ಕಿ.ಮೀ.), ಹಾಸನ-ಗೋರೂರು-ಗುಂಡ್ಲುಪೇಟೆ (249ಕಿ.ಮೀ.), ಬೆಳಗಾವಿ-ಬಿಜಾಪುರ-ಕಲಬುರಗಿ-ಹುಮ್ನಾಬಾದ್ (144 ಕಿ.ಮೀ.), ಕುಮಟಾ-ಶಿರಸಿ-ಹಾವೇರಿ-ಹರಪನಹಳ್ಳಿ-ಕೂಡ್ಲಗಿ (240ಕಿ.ಮೀ.), ಭಟ್ಕಳ-ಜೋಗ-ಸಿದ್ದಾಪುರ-ಶಿರಸಿ-ಮುಂಡಗೋಡ (210ಕಿ.ಮೀ.), ಕುಮಟಾ-ಸಿದ್ದಾಪುರ-ಹೊನ್ನಾಳಿ-ಪಾವಗಡ (390ಕಿ.ಮೀ.), ಶಿವಮೊಗ್ಗ-ಹೊನ್ನಾಳಿ-ದಾವಣಗೆರೆ (110)ಕಿ.ಮೀ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT