ಆರೋಗ್ಯ ಕೇಂದ್ರಗಳ ಸೇವೆಗಳಿಗೆ ಚಾಲನೆ 
ರಾಜಕೀಯ

ಆರೋಗ್ಯಕ್ಕೆ 1 ಗಂಟೆ ಮೀಸಲಿಡಿ

ಸಾರ್ವಜನಿಕರು ನಿತ್ಯ ಜೀವನದಲ್ಲಿ ಒಂದು ಗಂಟೆ ಕಾಲ ಆರೋಗ್ಯಕ್ಕಾಗಿ ಮೀಸಲಿಡಬೇಕು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ...

ಬೆಂಗಳೂರು: ಸಾರ್ವಜನಿಕರು ನಿತ್ಯ ಜೀವನದಲ್ಲಿ ಒಂದು ಗಂಟೆ ಕಾಲ ಆರೋಗ್ಯಕ್ಕಾಗಿ ಮೀಸಲಿಡಬೇಕು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಕಿವಿಮಾತು ಹೇಳಿದರು.
ಆರೋಗ್ಯ ಇಲಾಖೆ ಮಂಗಳವಾರ ಡಾ.ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಆಯೋಜಿಸಿದ್ದ `ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಉನ್ನತೀಕರಣಗೊಂಡಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಗಳಿಗೆ ಚಾಲನೆ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿಕ್ಷಣ ಪಡೆದವರಲ್ಲೇ ಹೆಚ್ಚಾಗಿ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿದ್ದು, ನಗರದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಅಧಿಕವಾಗಿದೆ. ನಗರಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸಮಸ್ಯೆಗಳು ಕಡಿಮೆಯಾಗಿವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಹೆಚ್ಚುತ್ತಿದ್ದು, ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ.
ನಿತ್ಯ ಒಂದು ಗಂಟೆಯನ್ನಾದರೂ ಜನರು ತಮ್ಮ ಆರೋಗ್ಯಕ್ಕೆ ಮೀಸಲಿಡಬೇಕು. ವ್ಯಾಯಾಮ, ತಪಾಸಣೆಗಾಗಿ ದಿನದ ಸಣ್ಣ ಸಮಯ ಮೀಸಲಿಟ್ಟರೂ ಆರೋಗ್ಯ ಸುಧಾರಿಸುತ್ತದೆ. ಸ್ಥಳೀಯ ಸಂ್ಸಥೆ ಹಾಗೂ ಸರ್ಕಾರ ಜಂಟಿಯಾಗಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿದೆ. ಆರೋಗ್ಯ ವಿಮೆ, ಉಚಿತ ಚಿಕಿತ್ಸೆ, ಸೇರಿದಂತೆ ಸರ್ಕಾರ ನೀಡುವ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದರು.

ಮೇಯರ್  ಶಾಂತ ಕುಮಾರಿ ಮಾತನಾಡಿ ಆರೋಗ್ಯ ಹಾಳಾದಾಗ ಮಾತ್ರ ಆಸ್ಪತ್ರೆಗಳಿಗೆ ತೆರಳುವ ಮನೋಭಾವವನ್ನು ಸಾರ್ವಜನಿಕರುಬಿಡಬೇಕು. ಕುಟುಂಬದಲ್ಲಿ ಎಲ್ಲ ಸದಸ್ಯರ ಆರೋಗ್ಯದ ಕಾಳಜಿ ವಹಿಸುವ ಮಹಿಳೆಯರು ತಮ್ಮ ಆರೋಗ್ಯ  ಮಾತ್ರ ಕಡೆಗಣಿಸುತ್ತಾರೆ. ಜ್ವರ ಬಂದುಹಲವು ದಿನಗಳಾದರೂ ಮನೆಮದ್ದಿನಲ್ಲೇ ಕಾಲ ಕಳೆಯುವ ಅಭ್ಯಾಸ ಬಿಟ್ಟು ಪ್ರಾಥಮಿಕ ಆರೋಗ್ಯ ಚಿಕಿತ್ಸಾ ಕೇಂದ್ರಗಳಿಗೆ ತೆರಳಬೇಕು ಎಂದರು.
ಸಚಿವ ರೋಶನ್ ಬೇ ಗ್, ಬಿಬಿಎಂಪಿ ಉಪಮೇಯರ್ ರಂಗಣ್ಣ, ವಿರೋಧ ಪಕ್ಷದನಾಯಕ ಮಂಜುನಾಥ ರೆಡ್ಡಿ, ಆಯುಕ್ತ ಲಕ್ಷಿ ್ಮನಾರಾಯಣ ಹಾಜರಿದ್ದರು.



ಚಾಲನೆ
2014-15 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ರು 25.60 ಕೋಟಿ ಮಂಜೂರಾಗಿದ್ದು, ಉನ್ನತೀಕರಣಗೊಂಡ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಗಳಿಗೆ ಚಾಲನೆ ನೀಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT