D V Sadananda Gowda 
ರಾಜಕೀಯ

ಮೋದಿ ಸರ್ಕಾರಕ್ಕೆ ಒಕ್ಕೂಟ ವ್ಯವಸ್ಥೆ ಬಲಪಡಿಸುವ ಕನಸು

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ- ಕೇಂದ್ರಗಳ ಸಂಬಂಧ ಸುಧಾರಣೆಗೆ ಮೋದಿ ಸರ್ಕಾರ ಒತ್ತು ನೀಡಿದೆ. ಹೀಗಾಗಿ ಕೇಂದ್ರವು ರಾಜ್ಯಗಳಿಗೆ ಶೇ. 62ರಷ್ಟು...

ಬೆಂಗಳೂರು: ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ- ಕೇಂದ್ರಗಳ ಸಂಬಂಧ ಸುಧಾರಣೆಗೆ ಮೋದಿ ಸರ್ಕಾರ ಒತ್ತು ನೀಡಿದೆ. ಹೀಗಾಗಿ ಕೇಂದ್ರವು ರಾಜ್ಯಗಳಿಗೆ ಶೇ. 62ರಷ್ಟು ಅನುದಾನ ವನ್ನು ನೇರವಾಗಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚು ಹಣ ಬಿಡುಗಡೆಯಾಗುತ್ತಿರಲಿಲ್ಲ, ಪಂಚವಾರ್ಷಿಕ ಯೋಜನೆಗಳಲ್ಲೇ ಹೆಚ್ಚಿನ
ಅನುದಾನ ನಿರೀಕ್ಷಿಸಬೇಕಾಗಿತ್ತು. ಕಳೆದ ವರ್ಷ ಶೇ. 32ರಷ್ಟಿದ್ದ 14ನೇ ಹಣಕಾಸು ಆಯೋಗದ ಅನುದಾನವನ್ನುಈ ಬಾರಿ ಶೇ. 42ಕ್ಕೆ ಹೆಚ್ಚಳ ಮಾಡಿದೆ. ಇದಲ್ಲದೆ ಕೇಂದ್ರದ
ತೆರಿಗೆ ಸಂಗ್ರಹಣೆ ಹಣದ ಭಾಗವೂ ರಾಜ್ಯಕ್ಕೆ ದೊರೆಯಲಿದೆ. ರಾಜ್ಯ ಸರ್ಕಾರ ತಮಗೆ ಬೇಕಾದ ಯೋಜನೆಗಳನ್ನು ರೂಪಿಸಿ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು. ಕಲ್ಲಿದ್ದಲು, ಗಣಿ, ಟೆಲಿಕಾಂ ಹರಾಜಿನಲ್ಲಿ ರಾಜ್ಯಗಳಿಗೆ ರು.  2ಲಕ್ಷ ಕೋಟಿಗೂ ಹೆಚ್ಚು ಹಣ ಹರಿದು ಬಂದಿದೆ. ಹಿಂದುಳಿದ ರಾಜ್ಯಗಳಿಗೆ ಶೇ. 75ರಷ್ಟು ಹಣ ಕೇಂದ್ರದಿಂದ ದೊರೆಯುತ್ತದೆ. ಪ್ರಥಮ ಬಾರಿಗೆ ರಾಜ್ಯಗಳ ಸಬಲೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಧ್ಯವಿರುವ ಎಲ್ಲ ಅವಕಾಶವನ್ನು ನೀಡಿದ್ದಾರೆ ಎಂದರು.
ವೋಟ್ ಬ್ಯಾಂಕ್ ಬಜೆಟ್: ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯನವರದ್ದು ವೋಟ್‍ಬ್ಯಾಂಕ್ ಬಜೆಟ್. ಕೇಂದ್ರದಿಂದ ರಾಜ್ಯಕ್ಕೆ ಅನುದಾನ
ಕಡಿತವಾಗಿಲ್ಲ. ಹೆಚ್ಚಿನ ಅನುದಾನ ದೊರೆತಿದೆ ಎಂದು ಹೇಳಿದರು.


ಇಂದಿನ ತಾಂತ್ರಿಕ ಯುಗದಲ್ಲಿ ಬಿಬಿಎಂಪಿ ವಿಭಜನೆ ಬೇಕಿಲ್ಲ. ಪಾಲಿಕೆಗೆ ಅಭಿವೃದ್ಧಿಗಾಗಿ ಹೆಚ್ಚಿನ ಹಣ ಹರಿದು ಬಂದಿದೆ. ಆಧುನಿಕ ತಂತ್ರಜ್ಞಾನದಲ್ಲಿ ಅಂಗೈ ಯಲ್ಲೇ ಮಾಹಿತಿ ದೊರೆ ಯುತ್ತದೆ. ಬೆಂಗಳೂರು ನಗರಕ್ಕೆ ಉತ್ತಮ ಆಡಳಿ ತ ದೊರೆಯ ಬೇಕೆಂದರೆ ಬಿಬಿಎಂಪಿ ವಿಭಜನೆ ಬೇಕಿಲ್ಲ. ವಿಭಜಿಸಿದರೆ ಮತ್ತೆ ಮೂರು ವರ್ಷ ಯೋ ಜನಾ ಪಟ್ಟಿ ತಯಾರಿಕೆಗೆ ಸಮಯ ವ್ಯರ್ಥವಾಗುತ್ತದೆ. ಇರುವ ತಂತ್ರಜ್ಞಾನ ಸಮರ್ಪಕವಾಗಿ ಬಳಸಿಕೊಂಡು ಕಾರ್ಯ ನಿರ್ವಹಿಸಬೇಕು.
- ಡಿ.ವಿ ಸದಾನಂದಗೌಡ, ಕೇಂದ್ರ ಸಚಿವ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT