ಜಗದೀಶ ಶೆಟ್ಟರ್ 
ರಾಜಕೀಯ

ಸಿಐಡಿಯನ್ನೇ ಮೊದಲು ವಿಚಾರಣೆಗೆ ಒಳಪಡಿಸಲಿ

ಐಎಎಸ್ ಅಧಿಕಾರಿ ಡಿ.ಕೆ. ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೊದಲು ಸಿಐಡಿ ಅಧಿಕಾರಿಗಳನ್ನೇ ವಿಚಾರಣೆಗೆ...

ಹುಬ್ಬಳ್ಳಿ: ಐಎಎಸ್ ಅಧಿಕಾರಿ ಡಿಕೆ. ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೊದಲು ಸಿಐಡಿ ಅಧಿಕಾರಿಗಳನ್ನೇ ವಿಚಾರಣೆಗೆ ಒಳಪಡಿಸಬೇಕಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರವಿ ಸಾವಿನ ವಿಷಯದಲ್ಲಿ ಸರ್ಕಾರದ ನಡೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಸಿಐಡಿ ಸಿದ್ಧ ಪಡಿಸಿದ ವರದಿ ಸೋರಿಕೆಯಾಗುವಂತೆ ನೋಡಿಕೊಂಡಿದ್ದೇ ಸರ್ಕಾರ ಎನ್ನುವ ಸಂದೇಹ ವ್ಯಕ್ತವಾಗುತ್ತಿದೆ.

ಸರ್ಕಾರ ಸಾಕ್ಷ್ಯ ನಾಶಪಡಿಸುವ ಪ್ರಯತ್ನ ಮಾಡಿದೆ. ಸಿಬಿಐ ಅಧಿಕಾರಿಗಳು ಸಿಐಡಿಯವರನ್ನು ಮೊದಲು ವಿಚಾರಣೆಗೆ ಒಳಪಡಿಸಿದರೆ ಪ್ರಕರಣದ ಹೂರಣ ಹೊರಬರಲು ಸಾಧ್ಯ ಎಂದರು.
ಡಿಕೆ ರವಿ ಪ್ರಕರಣವನ್ನು ಮುಚ್ಚಿ ಹಾಕುವ ಎಲ್ಲ ಪ್ರಯತ್ನಗಳನ್ನು ರಾಜ್ಯ ಸರ್ಕಾರ ಮಾಡಿತ್ತು.

ಪ್ರತಿಪಕ್ಷಗಳ ಹಾಗೂ ಜನರ ಒತ್ತಾಸೆ ಮೇರೆಗೆ ಪ್ರಕರಣ ಸಿಬಿಐಗೆ ವಹಿಸಲಾಯಿತು. ಸರ್ಕಾರದ ಲೋಪವಿಲ್ಲದೇ ಹೋಗಿದ್ದರೆ ಸಿಬಿಐ ತನಿಖೆಗೇಕೆ ಹಿಂದೇಟು ಹಾಕಿತು? ಯಾವ ಸರ್ಕಾರವೂ ಈ ರೀತಿ ನಡೆದು ಕೊಂಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರಕ್ಕೆ ಧೈರ್ಯವಿದ್ದರೆ ಅರ್ಕಾವತಿ ಭೂ ಕಬಳಿಕೆ ಸೇರಿದಂತೆ 20 ವರ್ಷಗಳಿಂದ ಈಚೆಗೆ ನಡೆದಿರುವ ಸಂದೇಹಾಸ್ಪದ ಎಲ್ಲ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಲಿ. ನಾವು ತನಿಖೆ ಎದುರಿಸಲು ಸಿದ್ಧ. ಕಾಂಗ್ರೆಸ್‍ಗೆ ಆ ಧೈರ್ಯ ವಿದೆಯೇ ಎಂದು ಸವಾಲು ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT