ಸ್ಪೀಕರ್ ಕಾಗೋಡು ತಿಮ್ಮಪ್ಪ 
ರಾಜಕೀಯ

ಕೊನೆಯಲ್ಲಿ ವಿಧೇಯಕ; ಸ್ಪೀಕರ್ ಅಸಮಾಧಾನ

ಅಧಿವೇಶನದ ಕೊನೆಯ ಕ್ಷಣದಲ್ಲಿ ವಿಧೇಯಕಗಳನ್ನು ತಂದು ಅನುಮೋದನೆಗೆ ಕೇಳುತ್ತೀರಿ, ನಾನೇನು ಮಾಡಲು ಸಾಧ್ಯ? ಎಲ್ಲ ಶಾಸಕರು ಚರ್ಚೆಗೆ ಅವಕಾಶ ಕೇಳುತ್ತಾರೆ...

ವಿಧಾನಸಭೆ: ಅಧಿವೇಶನದ ಕೊನೆಯ ಕ್ಷಣದಲ್ಲಿ ವಿಧೇಯಕಗಳನ್ನು ತಂದು ಅನುಮೋದನೆಗೆ ಕೇಳುತ್ತೀರಿ, ನಾನೇನು ಮಾಡಲು ಸಾಧ್ಯ? ಎಲ್ಲ ಶಾಸಕರು ಚರ್ಚೆಗೆ ಅವಕಾಶ ಕೇಳುತ್ತಾರೆ ಎಂದು ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷಾ ಕಲಿಕೆ ಹಾಗೂ ಭಾಷಾ ಮಾಧ್ಯಮದಂತಹ ವಿಚಾರ ಒಳಗೊಂಡ ವಿಧೇಯಕವನ್ನು ಕೊನೆಕ್ಷಣದಲ್ಲಿ ಮಂಡಿಸುತ್ತಿದ್ದೀರಿ. ಪ್ರತಿಯೊಬ್ಬ ಶಾಸಕರು ಚರ್ಚೆಗೆ ಅವಕಾಶ ಕೇಳುತ್ತಾರೆ. ಇಂಥ ಪ್ರಮುಖ ವಿಧೇಯಕಗಳನ್ನು ಮೊದಲೇ ಮಂಡಿಸಲು ಏಕೆ ಹಿಂಜರಿಯುತ್ತೀರಿ ಎಂದು ಸಚಿವ ಕಿಮ್ಮನೆ ರತ್ನಾಕರ ಅವರನ್ನು ಸ್ಪೀಕರ್ ಪ್ರಶ್ನಿಸಿದರು.

ಇದಕ್ಕೆ ಧ್ವನಿಗೂಡಿಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕಲಾಪ ಸಲಹಾ ಸಮಿತಿಯಲ್ಲಿ ಒಪ್ಪಿಗೆ ಸೂಚಿಸದ ವಿಧೇಯಕಗಳನ್ನು ಅಂತಿಮ ಕ್ಷಣದಲ್ಲಿ ಮಂಡಿಸಬಾರದು. ಆದರೆ, ರಾಜ್ಯ ಸರ್ಕಾರ ಇದನ್ನು ಪಾಲಿಸುತ್ತಿಲ್ಲ. ಸಾರ್ವಜನಿಕ ಹಿತಾಸಕ್ತಿ ಇರುವ ವಿಧೇಯಕಗಳನ್ನು ತರಾತುರಿಯಲ್ಲಿ ಮಂಡಿಸುವುದು ಎಷ್ಟರ ಮಟ್ಟಿಗೆ ಸರಿ ಎಂದರು.

ಸೋಮವಾರ ಅಂಗೀಕಾರಗೊಂಡ ವಿಧೇಯಕ
ಕರ್ನಾಟಕ ಧನವಿನಿಯೋಗ ವಿಧೇಯಕ
ಕರ್ನಾಟಕ ಮೌಲ್ಯವರ್ಧಿತ ತೆರಿಗೆ ತಿದ್ದುಪಡಿ ವಿಧೇಯಕ
ಕರ್ನಾಟಕ ತೆರಿಗೆ ಕಾನೂನುಗಳ ತಿದ್ದುಪಡಿ ವಿಧೇಯಕ
ಕರ್ನಾಟಕ ಸ್ಟ್ಯಾಂಪು ತಿದ್ದುಪಡಿ ವಿಧೇಯಕ
ಕರ್ನಾಟಕ ಸ್ಟ್ಯಾಂಪು ಎರಡನೇ ತಿದ್ದುಪಡಿ ವಿಧೇಯಕ
ನೋಂದಣಿ ತಿದ್ದುಪಡಿ ವಿಧೇಯಕ
ಕರ್ನಾಟಕ ವಿಧಾನಮಂಡಲದವರ ಸಂಬಳ, ನಿವೃತ್ತ ವೇತನ ಮತ್ತು ಭತ್ಯೆಗಳ ತಿದ್ದುಪಡಿ ವಿಧೇಯಕ
ಕರ್ನಾಟಕ ಸಚಿವರುಗಳ ಸಂಬಳ ಮತ್ತು ಭತ್ಯೆಗಳ ತಿದ್ದುಪಡಿ ವಿಧೇಯಕ
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಶಿಕ್ಷಕರ ವಗ್ವಾಣೆ ನಿಯಂತ್ರಣ ತಿದ್ದುಪಡಿ ವಿಧೇಯಕ
ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ, ನಿಯಂತ್ರಣ ವಿಧೇಯಕ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT