ಗಾಂಧೀಜಿ ಬೆಂಗಳೂರು ಭೇಟಿಯ ಶತಮಾನೋತ್ಸವ 
ರಾಜಕೀಯ

ಬೆಂಗಳೂರಿಗೆ ಗಾಂಧಿ ಭೇಟಿ ಶತಮಾನೋತ್ಸವ ಆಚರಣೆ

ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತರು ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಉಪ್ಪಿನ ಅಭಿಷೇಕ ಮಾಡಿ ಗಾಂಧೀಜಿ ಬೆಂಗಳೂರು...

ಬೆಂಗಳೂರು: ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತರು ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಉಪ್ಪಿನ ಅಭಿಷೇಕ ಮಾಡಿ ಗಾಂಧೀಜಿ ಬೆಂಗಳೂರು ಭೇಟಿಯ ಶತಮಾನೋತ್ಸವ ಆಚರಿಸಿದರು.
ಗಾಂಧೀಜಿ ಬೆಂಗಳೂರು ಭೇಟಿ ಶತಮಾನೋತ್ಸವ ಅಂಗವಾಗಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಗಾಂಧೀಜಿ ಭಾವಚಿತ್ರ ಮೆರವಣಿಗೆನಡೆಸಲಾಯಿತು. ನಂತರ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ಸಮಾರಂಭದಲ್ಲಿ ವಾಟಾಳ್ ನಾಗರಾಜ್ ಮತ್ತು ಕಾರ್ಯಕರ್ತರು ಗಾಂಧೀಜಿ ಭಾವಚಿತ್ರಕ್ಕೆ ಉಪ್ಪಿನ ಅಭಿಷೇಕ ಮಾಡಿದರು.
ಈ ಮೂಲಕ ಗಾಂಧೀಜಿ ನೇತೃತ್ವದ ಉಪ್ಪಿನ ಸತ್ಯಾಗ್ರಹದ ದಿನಗಳನ್ನು ಸ್ಮರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಗಾಂಧೀಜಿ ಬೆಂಗಳೂರಿನಲ್ಲಿ 45 ದಿನ ತಂಗಿದ್ದು, ನಾಡಿನ ಪುಣ್ಯವಾಗಿದ್ದು, ಅದನ್ನು ಎಲ್ಲರೂ ಸ್ಮರಿಸಬೇಕಿದೆ. ಹಾಗೆಯೇ ಅವರ ಹೋರಾಟದ ಹಾದಿಯಲ್ಲಿಯೇ ಎಲ್ಲರೂ ಸಾಗಬೇಕಾಗಿದೆ. ಗಾಂಧೀಜಿ ಅವರು ಅಂದು ಪ್ರಕೃತಿ ಚಿಕಿತ್ಸೆಗಾಗಿ ಬಂದಿದ್ದರು. ಅದಕ್ಕೀಗ 100 ವರ್ಷವಾಗಿರುವ ನೆನೆಪಿಗೆ ಸರ್ಕಾರ ಪ್ರತಿ ಜಿಲ್ಲೆಯಲ್ಲಿಯೂ ಆದರ್ಶ ಪ್ರಕೃತಿ ಚಿಕಿತ್ಸಾ ಕೇಂದ್ರಗಳನ್ನು ತೆರೆಯಬೇಕು. ಹಾಗೆಯೇ ಉಪ್ಪಿನ ಸತ್ಯಾಗ್ರಹ
ನೆನಪಿಸಲು ಸರ್ಕಾರ ಉಚಿತ ಅಕ್ಕಿ ಜತೆಗೆ ಉಪ್ಪನ್ನೂ ಉಚಿತವಾಗಿ ನೀಡಬೇಕೆಂದು ಆಗ್ರಹಿಸಿದರು. ಇದೇ ವೇಳೆ ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಗಾಂಧೀಜಿ ಫೋಟೋ ಕಳವು ಮಾಡಿರುವ ಘಟನೆ ಯನ್ನು ವಾಟಾಳ್ ಖಂಡಿಸಿದರು. ಫೋಟೋ ಕಳವು ಮಾಡಿದವರು ವಾಪಸ್ ನೀಡುವ ಮೂಲಕ ಗಾಂಧೀಜಿಗೆ ಗೌರವ ಸಲ್ಲಿಸಬೇಕೆಂದರು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT