ಗೃಹ ಸಚಿವ ಕೆ.ಜೆ.ಜಾರ್ಜ್ 
ರಾಜಕೀಯ

ಸರ್ಕಾರ, ಅಕ್ರಮ ಲಾಟರಿಗಿಲ್ಲ ನಂಟು: ಕೆ.ಜೆ.ಜಾರ್ಜ್

`ಅಕ್ರಮ ಲಾಟರಿ ದಂಧೆಯ ಕಿಂಗ್‍ಪಿನ್ ಯಾರೆಂದು ನನಗೆ ಗೊತ್ತಿಲ್ಲ, ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿಗೆ ಚೆನ್ನಾಗಿ ಗೊತ್ತಿರಬಹುದೇನೋ' ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ವ್ಯಂಗ್ಯವಾಡಿದ್ದಾರೆ...

ಬೆಂಗಳೂರು: `ಅಕ್ರಮ ಲಾಟರಿ ದಂಧೆಯ ಕಿಂಗ್‍ಪಿನ್ ಯಾರೆಂದು ನನಗೆ ಗೊತ್ತಿಲ್ಲ, ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿಗೆ ಚೆನ್ನಾಗಿ ಗೊತ್ತಿರಬಹುದೇನೋ' ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ವ್ಯಂಗ್ಯವಾಡಿದ್ದಾರೆ.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಅವರು, `ಅಕ್ರಮ ಲಾಟರಿ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾ ಎಂಬುವನನ್ನು ಬಂಧಿಸಲಾಗಿದೆ. ಜತೆಗೆ ಪೊಲೀಸ್ ಅಧಿಕಾರಿಯನ್ನೂ ಅಮಾನತುಗೊಳಿಸಿ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಪ್ರಕರಣ ಸಿಐಡಿಗೂವಹಿಸಲಾಗಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರಕ್ಕೂ, ಅಕ್ರಮ ಲಾಟರಿ ದಂಧೆಯ ಪ್ರಮುಖರಿಗೂ ಕುಮಾರಸ್ವಾಮಿ ಸಂಬಂಧ ಕಲ್ಪಿಸುತ್ತಿರುವುದರಲ್ಲಿ ಅರ್ಥವೇ ಇಲ್ಲ ಎಂದರು.

ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕುಮಾರಸ್ವಾಮಿ ಆಗ್ರಹಿಸುವುದಾದರೆ, `ನಮ್ಮ ಪೊಲೀಸ್ ವ್ಯವಸ್ಥೆ ಮೇಲೆ ಮಾಜಿ ಮುಖ್ಯಮಂತ್ರಿಗೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಬೇಕಾಗುತ್ತದೆ. ಹಾಗೆಯೇ ಎಲ್ಲ ಪ್ರಕರಣಗಳನ್ನು ಸಿಬಿಐಗೆ ವಹಿಸುವುದಾದರೆ, ನಮ್ಮ ಪೊಲೀಸ್ ವ್ಯವಸ್ಥೆ- ಸಿಐಡಿ ಬಾಗಿಲು ಹಾಕುವುದೊಳಿತಲ್ಲವೇ?' ಎಂದು ಕಟಕಿಯಾಡಿದರು.

ಸದ್ಯ ಪ್ರತ್ಯೇಕವಾಗಿರುವ ಲಾಟರಿ ನಿಯಂತ್ರಣ ದಳವನ್ನು ಪೊಲೀಸ್ ಇಲಾಖೆಯೊಂದಿಗೆ ವಿಲೀನ ಗೊಳಿಸುವ ಆದೇಶ ಹೊರಡಿಸಲಾಗಿದೆ. ಒಬ್ಬರು ಐಜಿ, ಇಬ್ಬರು ಎಸ್ಪಿ, 6 ಡಿವೈಎಸ್ಪಿ, ಜಿಲ್ಲಾಮಟ್ಟದಲ್ಲಿರುವ ಠಾಣೆ, ಇನ್ಸ್ ಪೆಕ್ಟರ್‍ಗಳು ಮಾತೃ ಇಲಾಖೆಯಡಿ ಕಾರ್ಯನಿರ್ವಹಿಸಲಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಎಸ್ಪಿ ಅಡಿಯಲ್ಲಿ ಒಂದು ಜಾಗೃತ ದಳ ರಚಿಸಲಾಗುತ್ತದೆ ಎಂದರು.

ಡಿ.ಕೆ.ರವಿ ಸಾವಿನ ಪ್ರಕರಣದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ವಿಜಯಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ವಿಜಯಕುಮಾರ್ ಅವರ ಬಳಿ ಮಾಹಿತಿ ಇದ್ದರೆ ಅವರು ಅದನ್ನು ತನಿಖಾಧಿಕಾರಿಗಳ ಬಳಿ ನೀಡಲಿ ಎಂದರು. ಗುಪ್ತಚರ ಇಲಾಖೆಗೆ ಪ್ರತ್ಯೇಕ ಕೇಡರ್: ಇನ್ನು ಮುಂದೆ ಗುಪ್ತಚರ ಇಲಾಖೆಗೆ ಪ್ರತ್ಯೇಕ ಕೇಡರ್ ಇರುತ್ತದೆ. ಪೊಲೀಸ್ ಇಲಾಖೆ ಹೊರತುಪಡಿಸಿ ಪ್ರತ್ಯೇಕವಾಗಿಯೇ ನೇಮಕಾತಿ ಮಾಡಲಾಗುತ್ತದೆಎಂದು ಗೃಹ ಸಚಿವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT