ಗೃಹ ಸಚಿವ ಕೆಜೆ ಜಾರ್ಜ್ ಮತ್ತು ಎಎಪಿ ಮುಖಂಡ ರವಿಕೃಷ್ಣಾ ರೆಡ್ಡಿ 
ರಾಜಕೀಯ

ಗೃಹ ಸಚಿವ ಕೆಜೆ.ಜಾರ್ಜ್ ಭ್ರಷ್ಟ: ರವಿಕೃಷ್ಣಾ ರೆಡ್ಡಿ

ಗೃಹ ಸಚಿವ ಕೆ.ಜೆ ಜಾರ್ಜ್ ಭ್ರಷ್ಟ ಹಾಗೂ ಅದಕ್ಷ ಸಚಿವ ಎಂದು ಎಎಪಿ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಹೇಳಿದ್ದಾರೆ...

ಬೆಂಗಳೂರು: ಗೃಹ ಸಚಿವ ಕೆ.ಜೆ ಜಾರ್ಜ್ ಭ್ರಷ್ಟ ಹಾಗೂ ಅದಕ್ಷ ಸಚಿವ ಎಂದು ಎಎಪಿ ಮುಖಂಡ ರವಿಕೃಷ್ಣಾ ರೆಡ್ಡಿ ಹೇಳಿದ್ದಾರೆ.

ರಾಜ್ಯ ಗೃಹ ಇಲಾಖೆಯ ಸಚಿವನೇ ದೊಡ್ಡ ಭ್ರಷ್ಟನಾಗಿದ್ದಾನೆ. ಈ ಇಲಾಖೆಗೆ ಮತ್ತೊಬ್ಬ ಭ್ರಷ್ಟ ಅಧಿಕಾರಿ ಕೆಂಪಯ್ಯ ಅವರನ್ನು ವಿಶೇಷ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಈ ಇಬ್ಬರು ಭ್ರಷ್ಟರ ನಾಯಕತ್ವದಲ್ಲಿ ಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ರವಿಕೃಷ್ಮಾರೆಡ್ಡಿ ಆರೋಪಿಸಿದ್ದಾರೆ.

ಅನೇಕ ಹಗರಣ ಮತ್ತು ಭೂಮಾಪಿಯಾದಲ್ಲಿ ಕೆಜೆ ಚಾರ್ಜ್ ಕೈವಾಡವಿರುವುದು ಬೆಳಕಿಗೆ ಬಂದಿದೆ. ಇನ್ನು ಕೆಂಪಯ್ಯನವರು ಭ್ರಷ್ಟ ಅಧಿಕಾರಿಯಾಗಿದ್ದರು ಎಂಬದು ಇಡೀ ಜನತೆಗೆ ಗೊತ್ತಿದೆ. ಆದರೂ ಕೂಡ ಇವರಿಬ್ಬರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉನ್ನತ ಮಟ್ಟದ ಸ್ಥಾನ ನೀಡಿದ್ದಾರೆ ಎಂದು ಅವರು ವಿಷಾಧಿಸಿದ್ದಾರೆ.

ಗೃಹ ಇಲಾಖೆಗೆ ಸಂಬಂಧಪಟ್ಟಂತೆ ಹಗರಣ ನಡೆದಿದ್ದರೆ ಅದಕ್ಕೆ ನೇರ ಹೊಣೆ ಮುಖ್ಯಮಂತ್ರಿ ಸಿದ್ದರಾಮಯ್ಯ. ಏಕೆಂದರೆ ಭ್ರಷ್ಟರನ್ನು ಇಟ್ಟುಕೊಂಡು ಅಧಿಕಾರ ನಡೆಸುತ್ತಿದ್ದಾರೆ. ಹಾಗಾಗಿ, ಅವರೇ ನೇರ ಹೊಣೆ ಹೊರಬೇಕಾಗುತ್ತದೆ. ಇಲ್ಲವಾದರೆ, ಕೂಡಲೇ ಭ್ರಷ್ಟ ಸಚಿವ ಕೆಜೆ ಜಾರ್ಜ್ ಮತ್ತು ಕೆಂಪಯ್ಯ ಅವರನ್ನು ಉನ್ನತ ಸ್ಥಾನದಿಂದ ವಜಾಗೊಳಿಸಿ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT