ದೇವೇಗೌಡ ಮತ್ತು ಸಿದ್ದರಾಮಯ್ಯ 
ರಾಜಕೀಯ

ಯಾವುದೇ ರಾಜಕಾರಣಿಗಳ ಫೋನ್ ಕದ್ದಾಲಿಕೆ ಚಟ ನಮ್ಮ ಸರ್ಕಾರಕ್ಕಿಲ್ಲ: ಸಿದ್ದು

ಪದೇ ಪದೇ ಸುಳ್ಳು ಹೇಳುತ್ತಾ ಜನರ ದಿಕ್ಕು ತಪ್ಪಿಸಲು ಮಾಡಿ ಪ್ರಧಾನಿ ದೇವೇಗೌಡರು ಯತ್ನಿಸುತ್ತಿದ್ದಾರೆ....

ಬೆಂಗಳೂರು: ಪದೇ ಪದೇ ಸುಳ್ಳು ಹೇಳುತ್ತಾ ಜನರ ದಿಕ್ಕು ತಪ್ಪಿಸಲು ಮಾಡಿ ಪ್ರಧಾನಿ ದೇವೇಗೌಡರು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಾಜಿ ಪ್ರಧಾನಿ ಜವಹರ್ ಲಾಲ್ ಅವರ ಪುಣ್ಯ ಸ್ಮರಣೆ ಅಂಗವಾಗಿ ವಿಧಾನಸೌಧದ ಬಳಿ ನೆಹರೂ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮತನಾಡಿದ ಅವರು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರ ಫೋನ್ ಕರೆಗಳನ್ನು ಕದ್ದಾಲಿಸುವ ಚಟ ನಮ್ಮ ಸರ್ಕಾರಕ್ಕಿಲ್ಲ ಎಂದು ಕಿಡಿಕಾರಿದ್ದಾರೆ. ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿದ್ದು ನಮ್ಮ ಸರ್ಕಾರದ ಮಹತ್ವದ ನಿರ್ಧಾರವಾಗಿದೆ ಎಂದರು.
ನಮ್ಮ ಸರ್ಕಾರ ದೇವೇಗೌಡರ ದೂರವಾಣಿಕರೆಗಳನ್ನು ಕದ್ದಾಲಿಕೆ ಮಾಡುತ್ತಿಲ್ಲ. ಈ ಬಗ್ಗೆ ನಮಗೆ ಮಾಹಿತಿಯೂ ಇಲ್ಲ . ಇದೊಂದು ಸತ್ಯಕ್ಕೆ ದೂರವಾದ ವದಂತಿ ಎಂದು ಸ್ಪಷ್ಟ ಪಡಿಸಿದರು.

ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿರುವುದರ ಸಂಬಂಧ ತನಿಖೆನ್ನು ಸಿಬಿಐ ಗೆ ನೀಡಲಾಗಿದ್ದು, ಪ್ರಕರಣ ಸಂಬಂಧ ಕೇಂದ್ರಕ್ಕೆ ಸಂಪೂರ್ಣ ವಿವರಣೆ ನೀಡಿ ಪತ್ರ ಬರೆಯುತ್ತೇನೆ ಎಂದರು.

ಮಾಜಿ ಪ್ರಧಾನಿ ಆದವರು ಜವಾಬ್ಧಾರಿಯಿಂದ ನಡೆದುಕೊಳ್ಳಬೇಕು, ಆದರೆ ಯಾವುದೇ ಸಾಕ್ಷಿ ಆಧಾರ ಗಳಿಲ್ಲದೇ ಬೇಜವಬ್ದಾರಿಯಿಂದ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT