ಎಚ್ ಡಿ ಕುಮಾಸ್ವಾಮಿ 
ರಾಜಕೀಯ

ಪ್ರಧಾನಿ ಮೋದಿ ಮೊದಲು ಗೋಮಾಂಸ ರಫ್ತು ತಡೆಯಲಿ: ಎಚ್‌ಡಿಕೆ

ಗೋಮಾಂಸ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತೀವ್ರ ತರಾಟೆಗೆ ಗೆದುಕೊಂಡಿರುವ ಜೆಡಿಎಸ್...

ಕಲಬುರ್ಗಿ: ಗೋಮಾಂಸ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತೀವ್ರ ತರಾಟೆಗೆ ಗೆದುಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ವಿದೇಶಕ್ಕೆ ರಫ್ತಾಗುವ ಗೋಮಾಂಸವನ್ನು ತಡೆಯಲಿ ಎಂದಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಡಿಕೆ, ಕಾಂಗ್ರೆಸ್ ಮತ್ತು ಬಿಜೆಪಿ ಕ್ಷುಲ್ಲಕ ಕಾರಣಕ್ಕೆ ದೇಶ ಒಡೆಯುವ ಕೆಲಸ ಮಾಡುತ್ತಿವೆ. ಗೋಮಾಂಸ ಸೇವನೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ಅನಗತ್ಯವಾಗಿ ಹೆಚ್ಚು ಸಮಯ ಹಾಳು ಮಾಡುತ್ತಿವೆ ಎಂದರು.

ಗೋ ರಕ್ಷಣೆ ಬಗ್ಗೆ ಬಿಜೆಪಿ ಹೆಚ್ಚು ಮಾತನಾಡುತ್ತಿದೆ. ಆದರೆ ಗೋವು ಸಾಕುವ ರೈತರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮೊದಲು ಗೋವುಗಳಿಗೆ ನೀರು, ಮೇವು ಪೂರೈಕೆ ಮಾಡಲಿ ಎಂದರು. ಅಲ್ಲದೆ ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ಕ್ರಮಕೈಗೊಳ್ಳಲಿ ಎಂದು ಒತ್ತಾಯಿಸಿದರು.


ಈ ಹಿಂದೆ ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಸರ್ಕಾರವೂ ರಾಜ್ಯವನ್ನು ಲೂಟಿ ಮಾಡಿದ್ದು, ಈಗ ಕಾಂಗ್ರೆಸ್ ಸರ್ಕಾರವೂ ಲೂಟಿ ಮಾಡುವುದನ್ನು ಮುಂದುವರೆಸಿದೆ ಎಂದು ಆರೋಪಿಸಿದರು.

ಇದೇ ವೇಳೆ ಹಂದಿ ಮಾಂಸ ಸೇವನೆ ಬಗ್ಗೆ ಹೇಳಿಕೆ ನೀಡಿದ್ದ ಪೇಜಾವರ ಶ್ರೀಗಳ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ, ಸ್ವಾಮಿಜಿ ಬಾಯಲ್ಲಿ ಇಂಥಹ ಪದ ಬಂದಿದ್ದು ಸರಿಯಲ್ಲ. ಇವರಿಗೆ ಸಮಾಜದಲ್ಲಿ ಶಾಂತಿಯಿಂದ ಬಾಳೋದು ಬೇಕಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಡಪಕ್ಷಗಳ ಬೆಂಬಲ ಸಿಕ್ಕರೂ ಟಿವಿಕೆಗೆ ಸಿಕ್ಕಿಲ್ಲ ಸರ್ಕಾರ ರಚನೆ ಭಾಗ್ಯ, ಮ್ಯಾಜಿಕ್ ಸಂಖ್ಯೆಗೆ 2 ಸ್ಥಾನ ಕೊರತೆ; ಇಂದು ಇಲ್ಲ ವಿಜಯ್ ಪ್ರಮಾಣ ವಚನ-Video

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ: ಇಂದು ಪ್ರಮಾಣ ವಚನ

ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..!

BYSರನ್ನು ಸಿಎಂ ಕುರ್ಚಿಯಿಂದ ಇಳಿಸಿದವರೇ ಗೌರವ ಸಮಾರಂಭ ನಡೆಸುತ್ತಿದ್ದಾರೆ, ಇದು ಅಭಿಮಾನೋತ್ಸವವಲ್ಲ-ರಾಜಕೀಯ ಗಿಮಿಕ್; ಜಾರಕಿಹೊಳಿ

ಟಿವಿಕೆ ಉದಯಕ್ಕೆ ಕಾರಣ ದ್ರಾವಿಡ ಪಕ್ಷಗಳ ವೈಫಲ್ಯ ಕಾರಣ: ಬಿಜೆಪಿ ಸಂಸದ ಯದುವೀರ್

SCROLL FOR NEXT