ಎಂಎಂ ಕಲಬುರ್ಗಿ ಹತ್ಯೆ (ಸಂಗ್ರಹ ಚಿತ್ರ) 
ರಾಜಕೀಯ

ಸದನದಲ್ಲಿ ಕಲಬುರ್ಗಿ ಹತ್ಯೆ ಸದ್ದು

ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಆರೋಪಿಗಳನ್ನು ಬಂಧಿಸಲಾಗದೆ ಸರ್ಕಾರ ಅಸಹಾಯಕವಾಗಿದೆ ಎಂದು ಪ್ರತಿಪಕ್ಷ ನಾಯಕ ಕೆ. ಎಸ್.ಈಶ್ವರಪ್ಪ ಹೇಳಿದ್ದಾರೆ...

ವಿಧಾನಸಭೆ: ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಆರೋಪಿಗಳನ್ನು ಬಂಧಿಸಲಾಗದೆ ಸರ್ಕಾರ ಅಸಹಾಯಕವಾಗಿದೆ ಎಂದು ಪ್ರತಿಪಕ್ಷ ನಾಯಕ ಕೆ. ಎಸ್.ಈಶ್ವರಪ್ಪ ಹೇಳಿದ್ದಾರೆ.

ಅಧಿವೇಶನದ ಮೊದಲ ದಿನವಾದ ಸೋಮವಾರ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತಾ ದರೂ ಅದೇ ನೆಪದಲ್ಲಿ ಈಶ್ವರಪ್ಪ ಅವರು, ಕಲಬುರ್ಗಿ ವಿಚಾರ ಪ್ರಸ್ತಾಪಿಸಿ, ಸರ್ಕಾರವನ್ನು ಟೀಕಿಸಿದರು. ಕಲಾಪ ಆರಂಭವಾಗುತ್ತಿದ್ದಂತೆ ಅಗಲಿದ ಗಣ್ಯರಿಗೆ ಸಭಾಪತಿ ಡಿ.ಎಚ್.ಶಂಕರಮೂರ್ತಿ ಶ್ರದ್ಧಾಂಜಲಿ ಸಲ್ಲಿಸಿದರು. ಆಗ ಸಭಾನಾಯಕ ಎಸ್.ಆರ್ .ಪಾಟೀಲ್ ಮಾತನಾಡಿ, ಕಲಬುರ್ಗಿ ಹಂತಕರನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಆ ಮೂಲಕ ಕಠಿಣ ಸಂದೇಶ ರವಾನಿಸಲಾಗುತ್ತದೆ ಎಂದರು.

ಇದೇ ವೇಳೆ ಈಶ್ವರಪ್ಪ ಮಾತನಾಡಿ, ಕಲಬುರ್ಗಿ ಅವರ ಹತ್ಯೆಯಾಗಿ ಹಲವು ತಿಂಗಳೇ ಕಳೆದರೂ ಆರೋಪಿಗಳನ್ನು ಬಂಧಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದು  ರಾಜ್ಯ ಸರ್ಕಾರದ ವೈಫಲ್ಯವೋ, ಇಲ್ಲವೋ ಗುಪ್ತಚರ ಇಲಾಖೆ ವಿಫಲವೋ ಎಂಬುದು ತಿಳಿಯುತ್ತಿಲ್ಲ. ಕಲಬುರ್ಗಿ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚಿಗೆ ಅನೇಕ ಬಣ್ಣಗಳನ್ನು ಹಚ್ಚಲಾಗುತ್ತಿದೆ.  ಅದು ಅಸಹಿಷ್ಣುತೆಯಂತೆ. ಅನೇಕ ಮಂದಿ ಪ್ರಶಸ್ತಿಗಳನ್ನು ವಾಪಸ್ ನೀಡುತ್ತಿದ್ದಾರೆ. ಅವರೇನೂ ಕಲುಬುರ್ಗಿ ಹತ್ಯೆ ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದ್ದರಿಂದ ಪ್ರಶಸ್ತಿ ವಾಪಸ್  ನೀಡುತ್ತಿದ್ದಾರೋ ಅಥವಾ ಪ್ರಗತಿಪರ ಚಿಂತಕರೊಬ್ಬರ ಕೊಲೆ ಖಂಡಿಸಿ ಹಾಗೆ ಮಾಡುತ್ತಿದ್ದಾರೋ ತಿಳಿಯುತ್ತಿಲ್ಲ ಎಂದು ಹೇಳಿದರು.

ಕಲಬುರ್ಗಿ ಹತ್ಯೆ ಪ್ರಕರಣವನ್ನು ಗೃಹ ಸಚಿವ ಪರಮೇಶ್ವರ್ ಸವಾಲಾಗಿ ಸ್ವೀಕರಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು. ಇದಕ್ಕೂ ಮುನ್ನ ವಿಧಾನಸಭೆ ಸದಸ್ಯ ವೆಂಕಟೇಶ್  ನಾಯಕ್, ಮಾಜಿ  ಸಚಿವ ಎಂ.ಮಹದೇವು, ಸಾಹಿತಿ ಕಯಾ್ಯರ ಕಿಂಜ್ಞಣ್ಣರೈ, ಚಿತ್ರನಿರ್ದೇಶಕ ಕೆ.ಎಸ್.ಎಲ್.ಸ್ವಾಮಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT