ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ (ಸಂಗ್ರಹ ಚಿತ್ರ) 
ರಾಜಕೀಯ

ಎತ್ತಿನ ಹೊಳೆಗೆ ತಡೆ ಇಲ್ಲ: ಎಂ.ಬಿ.ಪಾಟೀಲ್

ಎತ್ತಿನಹೊಳೆ ಯೋಜನೆಗೆ ಚೆನ್ನೈನ ಹಸಿರು ಪೀಠ ನೀಡಿರುವ ತಡೆಯಾಜ್ಞೆ ವಿಚಾರದಲ್ಲಿ ಅಗತ್ಯ ದಾಖಲೆ ಸಲ್ಲಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆದರೆ, ಇದು ತಡೆಯಾಜ್ಞೆ ಅಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ...

ವಿಧಾನಸಭೆ: ಎತ್ತಿನಹೊಳೆ ಯೋಜನೆಗೆ ಚೆನ್ನೈನ ಹಸಿರು ಪೀಠ ನೀಡಿರುವ ತಡೆಯಾಜ್ಞೆ ವಿಚಾರದಲ್ಲಿ ಅಗತ್ಯ ದಾಖಲೆ ಸಲ್ಲಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆದರೆ, ಇದು ತಡೆಯಾಜ್ಞೆ ಅಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಅರಣ್ಯೇತರ ಜಮೀನಿನಲ್ಲಿ ಕಾಮಗಾರಿ ನಡೆಸಲು ಅರಣ್ಯ ಇಲಾಖೆ ಮತ್ತು ಪರಿಸರ ಇಲಾಖೆ ಅನುಮತಿ ಬೇಕು ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆಯನ್ನೂ ಪಡೆದಿದ್ದೇವೆ. ಡಿ.7ರಂದು ಸ್ಪಷ್ಟನೆ ನೀಡುವವರೆಗೆ ಕಾಮಗಾರಿ ನಡೆಸುವುದಿಲ್ಲ ಎಂದು ನಮ್ಮ ನ್ಯಾಯವಾದಿಗಳು ಭರವಸೆ ನೀಡಿದ್ದಾರೆಯೇ ವಿನಃ ತಡೆಯಾಜ್ಞೆ ನೀಡಿಲ್ಲ ಎಂದು ವಾದಿಸಿದರು. ಅರಣ್ಯ ಇಲಾಖೆಯಿಂದ ನಿರಾಪೇಕ್ಷಣಾ ಪತ್ರ ಸಿಗಲಿದೆ. ಕುಡಿಯುವ ನೀರಿನ ಯೋಜನೆ ಕಾರಣ ಪರಿಸರ ಇಲಾಖೆಯಿಂದ ವಿನಾಯಿತಿ ಸಿಕ್ಕಿದೆ ಎಂದರು.

ಶಾಸಕರ ಆಕ್ಷೇಪ: ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್,ಅರಣ್ಯೇತರ ಜಮೀನಿನಲ್ಲಿ ಕಾಮಗಾರಿ ನಡೆಸಲು ಅರಣ್ಯ ಇಲಾಖೆ ಅನುಮತಿ ಯಾಕೆ ಬೇಕು .ವಕೀಲರು ಯಾಕೆ ನಿರ್ಲಕ್ಷ್ಯ ಮಾಡಿದರು ಎಂದರು. ಸಚಿವ ಪಾಟೀಲ್ ಮಾಹಿತಿ ಇರಲಿಲ್ಲ ಎಂದಾಗ ಕೆರಳಿದ ರಮೇಶ್ ಕುಮಾರ್, ಹೆರಿಗೆ ನೋವು ಹೆತ್ತವಳಿಗೆ ಗೊತ್ತು. ನೀವು ಆಲಮಟ್ಟಿ ಕೆಳಗಿರುವವರು. ನಾವು 1100 ಅಡಿ ಪಾತಾಳದಲ್ಲಿದ್ದೇವೆ. ನಿಮಗೆ ಖುಷಿ ಬಂದಂತೆ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT