ಬಸವರಾಜ್ ಬೊಮ್ಮಾಯಿ (ಸಂಗ್ರಹ ಚಿತ್ರ) 
ರಾಜಕೀಯ

ಅನುದಾನ ದುರ್ಬಳಕೆ ಬಿಜೆಪಿಯಿಂದ ಆರೋಪ

ಸಹಕಾರ ಇಲಾಖೆಗೆ ಕೇಂದ್ರ ಸರ್ಕಾರ ನೀಡುವ ಪ್ರೋತ್ಸಾಹ ಧನವನ್ನು ರೈತರಿಗೆ ನೀಡದೇ ರಾಜ್ಯ ಸರ್ಕಾರ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿಯ ಲಕ್ಷ್ಮಣ ಸವದಿ ಮತ್ತು ಬಸವರಾಜ್ ಬೊಮ್ಮಾಯಿ ಮಾಡಿದ ಆರೋಪ ವಿಧಾನಸಭೆಯಲ್ಲಿ ಶುಕ್ರವಾರ ಕೋಲಾಹಲಕ್ಕೆ ಕಾರಣವಾಯಿತು...

ವಿಧಾನಸಭೆ: ಸಹಕಾರ ಇಲಾಖೆಗೆ ಕೇಂದ್ರ ಸರ್ಕಾರ ನೀಡುವ ಪ್ರೋತ್ಸಾಹ ಧನವನ್ನು ರೈತರಿಗೆ ನೀಡದೇ ರಾಜ್ಯ ಸರ್ಕಾರ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿಯ ಲಕ್ಷ್ಮಣ ಸವದಿ ಮತ್ತು ಬಸವರಾಜ್ ಬೊಮ್ಮಾಯಿ ಮಾಡಿದ ಆರೋಪ ವಿಧಾನಸಭೆಯಲ್ಲಿ ಶುಕ್ರವಾರ ಕೋಲಾಹಲಕ್ಕೆ ಕಾರಣವಾಯಿತು.

ಬರದ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, ಸಹಕಾರ ಇಲಾಖೆಯಲ್ಲಿ ಅವಧಿ ಪೂರ್ವ ಸಾಲ ವಸೂಲಿ ನಡೆಯುತ್ತಿದೆ. ಇಲಾಖೆ ಸಾಹುಕಾರ್ ಇಲಾಖೆಯಾಗಿ ಪರಿವರ್ತನೆಯಾಗುತ್ತಿದೆ ಎಂದು ಆರೋಪಿಸಿದರು.

ಅವಧಿ ಪೂರ್ವ ಸಾಲ ಕಟ್ಟುವ ರೈತರಿಗೆ ಕೇಂದ್ರ ಶೇ.3ರಷ್ಟು ಪ್ರೋತ್ಸಾಹ ನೀಡುತ್ತದೆ. ಆದರೆ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುತ್ತಿದ್ದೇವೆ ಎನ್ನುವ ಸರ್ಕಾರ ಕಳೆದ 2  ವರ್ಷದಿಂದ ಪ್ರೋತ್ಸಾಹ ಧನವನ್ನು ರೈತರಿಗೆ ತಲುಪಿಸಿಲ್ಲ. ನಿಮ್ಮದು ಬೇಜವಾಬ್ದಾರಿ ಸರ್ಕಾರ ವಾರ್ಷಿಕ ರು.150 ಕೋಟಿಯಷ್ಟು ಹಮ ರೈತರಿಗೆ ದೊರೆಯದಂತೆ ಮಾಡುತ್ತಿದ್ದೀರಿ. ಶೂನ್ಯ ಬಡ್ಡಿ ದರ ಎನ್ನುವ ನೀವು ಬಡ್ಡಿಯನ್ನು ಶೇ.14 ರಿಂದ ಶೂನ್ಯಕ್ಕೆ ಇಳಿಸಿಲ್ಲ. ನಮ್ಮ ಕಾಲದಲ್ಲಿ ಶೇ.1ರಷ್ಟಿದ್ದ ಬಡ್ಡಿ ಶೂನ್ಯಕ್ಕೆ ಇಳಿಸಿದ್ದೀರಿ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT