ವಿಧಾನಸಭೆಯಲ್ಲಿ ಶುಕ್ರವಾರ ಜೆಡಿಎಸ್‍ನ ಶಿವಲಿಂಗೇಗೌಡ ಅವರು ಶಾಸಕ ಅಶೋಕ್ ಖೇಣಿ ಅವರನ್ನು ತರಾಟೆಗೆ ತೆಗೆದುಕೊಂಡಿರುವುದು. 
ರಾಜಕೀಯ

ವಿವಾದಾತ್ಮಕ ಹೇಳಿಕೆ: ಖೇಣಿಗೆ ಜೆಡಿಎಸ್ ಸದಸ್ಯರ ತರಾಟೆ

ರೈತರ ಆತ್ಮಹತ್ಯೆಗೆ ಸಾಲ ಮತ್ತು ಬರ ಕಾರಣವಲ್ಲ ಎಂಬ ಹೇಳಿಕೆ ನೀಡಿ ವಿವಾದದ ಕಿಡಿ ಹೊತ್ತಿಸಿದ್ದ ಶಾಸಕ ಅಶೋಕ್ ಖೇಣಿ ವಿಧಾನಸಭೆಯಲ್ಲೂ ಮತ್ತೆ ಇದೇ ಹೇಳಿಕೆ ಪುನರುಚ್ಚರಿಸಿ ಜೆಡಿಎಸ್ ಶಾಸಕರ ವಿರೋಧ ಎದುರಿಸುವಂತಾಯಿತು...

ವಿಧಾನಸಭೆ: ರೈತರ ಆತ್ಮಹತ್ಯೆಗೆ ಸಾಲ ಮತ್ತು ಬರ ಕಾರಣವಲ್ಲ ಎಂಬ ಹೇಳಿಕೆ ನೀಡಿ ವಿವಾದದ ಕಿಡಿ ಹೊತ್ತಿಸಿದ್ದ ಶಾಸಕ ಅಶೋಕ್ ಖೇಣಿ ವಿಧಾನಸಭೆಯಲ್ಲೂ ಮತ್ತೆ ಇದೇ ಹೇಳಿಕೆ ಪುನರುಚ್ಚರಿಸಿ ಜೆಡಿಎಸ್ ಶಾಸಕರ ವಿರೋಧ ಎದುರಿಸುವಂತಾಯಿತು.

ಬರದ ಮೇಲಿನ ಚರ್ಚೆ ಸಂದರ್ಭದಲ್ಲಿ ಆರ್. ಎಸ್.ದೇಶಪಾಂಡೆ ಎಂಬುವರು ನೀಡಿದ ವರದಿ ಆಧರಿಸಿ ಮಾತನಾಡಿದ ಖೇಣಿ, ಶೇ.25ರಷ್ಟು ರೈತರು ಕುಡಿತ, ಜೂಜು, ಕಾಯಿಲೆಗಳಿಂದಲೂ ಮೃತಪಡುತ್ತಿದ್ದಾರೆ. ಹೀಗಾಗಿ ರೈತರ ಆತ್ಮಹತ್ಯೆ ವಿಚಾರದಲ್ಲಿ ಪರಿಹಾರ ನೀಡುವುದೇ ಪರಿಹಾರವಲ್ಲ ಎಂದು ಪ್ರತಿಪಾದಿಸಿದರು. ಇದಕ್ಕೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅದ್ಯಾವುದೋ ಹುಚ್ಚ ಕೊಟ್ಟ ವರದಿ ಇಟ್ಟುಕೊಂಡು ರೈತರ ಬಗ್ಗೆ ಮಾತನಾಡುತ್ತೀರಾ? ಇದೇ ಇದೇ ರೀತಿ ಮಾತನಾಡಿ ಬೈಸಿಕೊಂಡಿದ್ದು ಸಾಕಾಗಿಲ್ಲವೇ ? ಎಂದು ತರಾಟೆಗೆ ತೆಗೆದುಕೊಂಡ ರು. ಖೇಣಿ ತಮ್ಮ ಹೇಳಿಕೆ ವಾಪಸ್ ತೆಗೆದುಕೊಳ್ಳುವಂತೆ ಆಗ್ರಹಿಸಿ ಸ್ಪೀಕರ್ ಪೀಠದ ಮುಂದೆ ಪ್ರತಿಭಟನೆ ನಡೆಸಿದರು.

ಆದರೆ, ಹೇಳಿಕೆ ವಾಪಸ್ ಪಡೆಯುವುದಕ್ಕೆ ಖೇಣಿ ಸುತಾರಾಂ ಒಪ್ಪಲಿಲ್ಲ. ನಾನೇನು ತಪ್ಪು ಮಾತಾಡಿಲ್ಲ. ಆದರೆ ರೈತ ನಾಯಕರೇ ಹೆಚ್ಚಾಗಿರುವ ಹಾಸನ, ಮಂಡ್ಯ, ಮೈಸೂರಿನಲ್ಲೇ ಏಕೆ ರೈತರ ಆತ್ಮಹತ್ಯೆ ಪ್ರಮಾಣ ಹೆಚ್ಚಾಗಿದೆ? ನಮ್ಮ ಬೀದರ್‍ನಲ್ಲಿ ಒಬ್ಬ ರೈತ ಮಾತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಾಗ ಜೆಡಿಎಸ್ ನಾಯಕರು ಕ್ಷಣ ಹೊತ್ತು ತಬ್ಬಿಬ್ಬಾದರು. ಆದರೆ ಶಿವಲಿಂಗೇಗೌಡರು ಮಾತ್ರ ಪ್ರತಿಭಟನೆ ನಿಲ್ಲಿಸದೇ ಇದ್ದಾಗ ಸ್ಪೀಕರ್ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಎ.ಬಿ.ಮಾಲಕರೆಡ್ಡಿ ಅವರು ರೆಡ್ಡಿ ಖೇಣಿ ಅವರ ಪ್ರಸ್ತಾಪವನ್ನು ಕಡತದಿಂದ
ತೆಗೆದು ಹಾಕುವಂತೆ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT