ಕೆ.ಎಸ್.ಈಶ್ವರಪ್ಪ 
ರಾಜಕೀಯ

ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ.

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ.

ಇಂದು ವಿಧಾನ ಪರಿಷತ್​ನಲ್ಲಿ ವಿಷಯ ಪ್ರಸ್ತಾಪಿಸಿದ ಈಶ್ವರಪ್ಪ ಅವರು, ಕಳೆದ ಒಂದು ವಾರದಲ್ಲಿ ಎರಡು ಸಲ ನನಗೆ ಜೀವ ಬೆದರಿಕೆ ಕರೆ ಬಂದಿದ್ದು, ವಿದೇಶದಿಂದ ಕರೆ ಮಾಡಿದ್ದ ವ್ಯಕ್ತಿ, ಉರ್ದು ಮಿಶ್ರಿತ ಕನ್ನಡ ಭಾಷೆಯಲ್ಲಿ ತಮಗೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದರು.

ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ  ನನಗೆ ಸೂಕ್ತ ಭದ್ರತೆ ನೀಡಬೇಕು ಎಂದು ಸದನದಲ್ಲಿ ಮನವಿ ಮಾಡಿದ ಈಶ್ವರಪ್ಪ, ಮಂತ್ರಿಗಳು, ಉದ್ಯಮಿಗಳಿಗೆ ಬೆದರಿಕೆ ಹಾಕುವುದು ಹೆಚ್ಚಾಗಿದೆ. ಹಾಗಾಗಿ ಗೃಹ ಇಲಾಖೆ ಕ್ರಮ ಕೈಗೊಳ್ಳಬೇಕು ಮತ್ತು ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಒಂದು ವಾರದಲ್ಲಿ ಎರಡು ಸಲ ಜೀವ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಈ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರೊಂದಿಗೆ ಚರ್ಚಿಸಿ, ಇಂದು ಸಂಜೆ ಪೊಲೀಸರಿಗೆ ದೂರು ನೀಡಲಿದ್ದಾರೆ ಎನ್ನಲಾಗಿದೆ.

ಟಿಪ್ಪು ಜಂಯತಿ ಆಚರಣೆ ಕುರಿತು ಈಶ್ವರಪ್ಪ ನೀಡಿದ ಹೇಳಿಕೆಗಳು ಇದಕ್ಕೆ ಕಾರಣ ಎನ್ನಲಾಗಿದೆ. ಕೇರಳದ ರಾಷ್ಟ್ರ ದ್ರೋಹಿ ಮುಸ್ಲಿಂರು ನಮ್ಮ ರಾಜ್ಯಕ್ಕೆ ಬಂದು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ಹಿಂದೂ ಗಳನ್ನು ಕೊಲೆ ಮಾಡುತ್ತಿದ್ದಾರೆ ಎಂಬ ವಿವಾದತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT