ಲೋಕಾಯುಕ್ತ ನ್ಯಾ. ವೈ.ಭಾಸ್ಕರ್ ರಾವ್ 
ರಾಜಕೀಯ

ಲೋಕಾಯುಕ್ತ ಪದಚ್ಯುತಿ: ಸಿಜೆಗೆ ನಿರ್ಣಯ ರವಾನಿಸಲು ಸಿದ್ಧತೆ

ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಪದಚ್ಯುತಿಗೊಳಿಸುವ ಶಾಸಕಾಂಗದ ಪ್ರಯತ್ನ ಅಂತಿಮ ಹಂತ ತಲುಪಿದ್ದು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ರವಾನೆಯಾಗಲು ಕ್ಷಣಗಣನೆ ಆರಂಭವಾಗಿದೆ.

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಪದಚ್ಯುತಿಗೊಳಿಸುವ ಶಾಸಕಾಂಗದ ಪ್ರಯತ್ನ ಅಂತಿಮ ಹಂತ ತಲುಪಿದ್ದು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ರವಾನೆಯಾಗಲು ಕ್ಷಣಗಣನೆ ಆರಂಭವಾಗಿದೆ.
ಮಂಗಳವಾರ ನಡೆದಮಹತ್ವದ ಬೆಳವಣಿಗೆಯಲ್ಲಿ ಮೇಲ್ಮನೆ ಸಭಾಪತಿ ಡಿ.ಎಚ್.ಶಂಕರಮೂರ್ತಿ ಮತ್ತು ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪನವರು ವಿಧಾನಮಂಡಲದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಲೋಕಾಯುಕ್ತರನ್ನು ಪದಚ್ಯುತಿಗೊಳಿಸಬೇಕೆಂಬ ಎರಡೂ ಸದನಗಳ ನಿರ್ಣಯವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಸಲ್ಲಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಈ ಬೆಳವಣಿಗೆಯ ಮೂಲಕ ಎರಡೂ ಸದನಗಳ ಮುಖ್ಯಸ್ಥರು ಲೋಕಾಯುಕ್ತರ ಪದಚ್ಯುತಿ ಮಾಡಬೇಕೆಂಬ ಶಾಸಕರ ಪ್ರಸ್ತಾವ ಅಂಗೀಕರಿಸಿ ಮುಂದಿನ ಪ್ರಕ್ರಿಯೆಗಳಿಗೆ ಚಾಲನೆ ಕೊಟ್ಟಂತೆ ಆಗಿದೆ.
ಹಾಗೆಯೇ ಲೋಕಾಯುಕ್ತರ ಪದಚ್ಯುತಿ ಕುರಿತಾಗಿ ಶಾಸಕರು ನೀಡಿರುವ ದಾಖಲೆ ಅಡಕಗಳು ಪ್ರಸ್ತಾವನೆಯನ್ನು ಕೂಲಂಕಷವಾಗಿ ಇನ್ನೊಮ್ಮೆ ಪರಿಶೀಲಿಸುವ ಜೊತೆಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಿಗೆಸಲ್ಲಿಸಬೇಕಾದ ಸೂಕ್ತಪತ್ರ, ಅಡಕಗಳ ಬಗ್ಗೆ ತಯಾರಿಮಾಡಿಕೊಳ್ಳಲು ಸಭೆಯಲ್ಲಿ ಅಧಿಕಾರಿಗಳಿಗೆ ಎರಡೂ ಸದನದ ಮುಖ್ಯಸ್ಥರು ತಿಳಿಸಿದ್ದಾರೆ.
ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಾಗೋಡು ತಿಮ್ಮಪ್ಪ, ಅಧಿಕಾರಿಗಳು ತ್ವರಿತವಾಗಿ ಕೆಲಸ ಮಾಡಲಿದ್ದಾರೆ. ಲೋಕಾಯುಕ್ತರ ಮೇಲಿನ ಆರೋಪಗಳು ಸಾಬೀತಾಗುವಂತೆ ಪಕ್ಕಾ ದಾಖಲೆಗಳನ್ನು ಎತ್ತಿ ತೋರಿಸುವಂತೆ ನಾವು ವರದಿ ಸಲ್ಲಿಸಬೇಕಾಗಿದೆ. ಆದಷ್ಟು ಶೀಘ್ರವಾಗಿ ಪ್ರಕ್ರಿಯೆ ನಡೆಯುತ್ತದೆ. ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಂದ ಉತ್ತರ ಬಂದ ನಂತರ ಸದನದಲ್ಲಿ ತಿಳಿಸಿ ರಾಜ್ಯಪಾಲರಿಗೆ ಕಳುಹಿಸುವ ಕೆಲಸ ಮಾಡಲಾಗುತ್ತದೆ ಎಂದು ವಿವರಿಸಿದರು. ಈ ವೇಳೆ ಮಾತನಾಡಿದ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಎರಡೂ ಸದನದಲ್ಲಿ ಏಕಕಾಲಕ್ಕೆ ಅರ್ಜಿ ಕೊಟ್ಟಿದ್ದರಿಂದ ಒಟ್ಟಿಗೆ ಸಭೆ ನಡೆಸಿದ್ದೇವೆ. ಈಗಾಗಲೇ ಈ ವಿಚಾರವಾಗಿ ಮೂರು ಸಭೆ ನಡೆಸಿದ್ದು, ಅಂತಿಮ ತೀರ್ಮಾನ ಕೈಗೊಂಡಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT