ಕೆ.ಎಸ್. ಈಶ್ವರಪ್ಪ 
ರಾಜಕೀಯ

ಅತ್ಯಾಚಾರಿಗಳನ್ನು ನಪುಂಸಕರನ್ನಾಗಿಸಿ: ಕೆ.ಎಸ್ ಈಶ್ವರಪ್ಪ

ಒಂದು ದೇಶದಲ್ಲಿ ಅತ್ಯಾಚಾರ ಎಸಗಿದ ಆಪಾದಿತನನ್ನ ನಪುಂಸಕನಾಗಿಸಲಾಗುತ್ತದೆ. ಇಲ್ಲೂ ಆ ಕ್ರಮವನ್ನೇಕೆ ಕೈಗೊಳ್ಳಬಾರದು? ಇಂಜೆಕ್ಷನ್ ನೀಡಿದರೆ ಅತ್ಯಾಚಾರ ...

ವಿಧಾನಪರಿಷತ್: ಅತ್ಯಾಚಾರ ನಿಯಂತ್ರಣ ಕೈಗೊಳ್ಳಲು ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಹೇಳುವ ಸರ್ಕಾರ, ಕಠಿಣ ಕ್ರಮ ಏನೆಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಕೇಳಿದ್ದಾರೆ.

`ಒಂದು ದೇಶದಲ್ಲಿ ಅತ್ಯಾಚಾರ ಎಸಗಿದ ಆಪಾದಿತನನ್ನ ನಪುಂಸಕನಾಗಿಸಲಾಗುತ್ತದೆ. ಇಲ್ಲೂ ಆ ಕ್ರಮವನ್ನೇಕೆ ಕೈಗೊಳ್ಳಬಾರದು? ಇಂಜೆಕ್ಷನ್ ನೀಡಿದರೆ ಅತ್ಯಾಚಾರ ಮಾಡಿದವನೂ ಏಳಬಾರದು,

ಬೇರೆ ಏನೂ ಏಳಬಾರದು' ಎಂದು ಕಠೋರ ಅಭಿಪ್ರಾಯವನ್ನು ಈಶ್ವರಪ್ಪ ಹೊರಹಾಕಿದರು.ಅತ್ಯಾಚಾರ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರೂ ಮುಖ್ಯಮಂತ್ರಿ ಕಠಿಣ ಶಿಕ್ಷೆ ಕೊಡುತ್ತೇವೆಂದು ಮಾತ್ರ ಹೇಳುತ್ತಿದ್ದಾರೆಯೇ ಹೊರತು ಯಾವ ಶಿಕ್ಷೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಿದರೆ ಎಲ್ಲವೂ ಸರಿಯಾಗುತ್ತದೆ ಎಂದು ಸಲಹೆ ನೀಡಿದರು.

ನ್ಯಾಯಾಲಯಗಳಲ್ಲಿ ಡೇಟ್ ಸಿಗುತ್ತದೆಯೇ ವಿನಾ ನ್ಯಾಯ ಸಿಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರಲ್ಲದೇ, ಉಗ್ರಪ್ಪ ಸಮಿತಿ ಹೊರತಾಗಿ ಶಾಸಕರು, ತಜ್ಞರ ಒಂದು ತಂಡ ರಚಿಸಿ ತುರ್ತಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ಕಾರ ಸಲಹೆ ಪಡೆದುಕೊಳ್ಳಲಿ ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT