ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜಕೀಯ

ಮುಖ್ಯಮಂತ್ರಿ ಇಂದು ದೆಹಲಿಗೆ

ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಯಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಮಂಗಳವ ಆರ ದೆಹಲಿಗೆ ತೆರಳಲಿದ್ದಾರೆ...

ಚಿತ್ರದುರ್ಗ: ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಯಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಮಂಗಳವ ಆರ ದೆಹಲಿಗೆ ತೆರಳಲಿದ್ದಾರೆ.

ಹೈಕಮಾಂಡ್ ಜತೆಗೆ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ಈ ವಿಚಾರವನ್ನು ಖುದ್ದು ಸಿದ್ದರಾಮಯ್ಯ ಅವರೇ ಖಚಿತಪಡಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆ  ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಚಿತ್ರದುರ್ಗ ಕ್ಷೇತ್ರ ಪ್ರತಿನಿಧಿಸುತ್ತಿರುವ ರಘು ಆಚಾರ್ ಹೊರಗಿನ ಅಭ್ಯರ್ಥಿ ಎಂದು ಯಾಕೆ ಅನಿಸಬೇಕು? ಈಗಾಗಲೇ  ಅವರು ಈ ಕ್ಷೇತ್ರ ಪ್ರತಿನಿಧಿಸಿ ಕಳೆದೆರಡು ವರ್ಷಗಳಿಂದಲೂ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಸೋಮವಾರ ಪತ್ರಕರ್ತರ ಪ್ರಶ್ನೆಪೊದಕ್ಕೆ ಉತ್ತರಿಸಿದರು.

ಇದೇ ವೇಳೆ, ಬುಧವಾರ ಬಹುತೇಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದೂ ಮಾಹಿತಿ ನೀಡಿದರು. ಲೋಕಾಯುಕ್ತ ಮತ್ತು ಉಪಲೋಕಾಯುಕ್ತರ ಪದಚ್ಯುತಿ ವಿಚಾರ ಸಂಬಂಧ  ವಿಧಾನಸಭಾಧ್ಯಕ್ಷರು ಹೈಕೋರ್ಟ್‍ಗೆ ವರದಿ ಸಲ್ಲಿಸಲಿದ್ದಾರೆ. ಸರಳ ವಿವಾಹದ ಬಗ್ಗೆ ಖಾಸಗಿ ವಿಧೇಯಕವನ್ನು ಮಂಡಿಸಲಾಗಿದೆ. ಈ ವಿಧೇಯಕದ ಬಗ್ಗೆ ಚರ್ಚೆ ನಡೆಯಬೇಕಾಗಿದೆ ಎಂದು ಸಿಎಂ ಈ ವೇಳೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT