ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ 
ರಾಜಕೀಯ

ಸಮಾಜದೆಡೆಗೆ ಆರ್ ಎಸ್ಎಸ್, ಬಿಜೆಪಿ ದೃಷ್ಟಿಕೋನ ದಾದ್ರಿ ಪ್ರಕರಣಕ್ಕೆ ಹೊಣೆ: ಕಾಂಗ್ರೆಸ್

ಸಮುದಾಯ ಮತ್ತು ಸಮಾಜದ ಬಗ್ಗೆ ಬಿಜೆಪಿ, ಆರ್.ಎಸ್.ಎಸ್, ಪ್ರಧಾನಿ ನರೆಂದ್ರ ಮೋದಿ ಅವರ ದೃಷ್ಟಿಕೋನ ದಾದ್ರಿ ಪ್ರಕರಣಕ್ಕೆ ಹೊಣೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನವದೆಹಲಿ: ಸಮುದಾಯ ಮತ್ತು ಸಮಾಜದ ಬಗ್ಗೆ ಬಿಜೆಪಿ, ಆರ್.ಎಸ್.ಎಸ್, ಪ್ರಧಾನಿ ನರೆಂದ್ರ ಮೋದಿ ಅವರ ದೃಷ್ಟಿಕೋನ ದಾದ್ರಿ ಪ್ರಕರಣಕ್ಕೆ ಹೊಣೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಉತ್ತರ ಪ್ರದೇಶ ದಾದ್ರಿ ಎಂಬ ಊರಿನಲ್ಲಿ ಹಸುಗಳನ್ನು ಮುಸ್ಲಿಂ ಕುಟುಂಬವೊಂದು ಹತ್ಯೆ ಮಾಡಿ ಸೇವನೆ ಮಾಡಿದೆ ಎಂದು ಶಂಕಿಸಿದ ಗುಂಪೊಂದು ಮುಸ್ಲಿಂ ಕುಟುಂಬದ ಮೇಲೆ ದಾಳಿ ಮನೆಯಲ್ಲಿದ್ದ ಮಹಮ್ಮದ್ ಇಕ್ಲಾಕ್ (50) ಎಂಬ ವ್ಯಕ್ತಿಯನ್ನು ಹತ್ಯೆ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ "ದಾದ್ರಿಯ ಪ್ರಕರಣ ಅಪಾಯಕಾರಿ ಮತ್ತು ಭಯಾನಕವಾಗಿದೆ. ಆರ್.ಎಸ್.ಎಸ್ ಹಾಗೂ ಅದಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಲವು ವರ್ಷಗಳು ನಡೆಸಿದ ಕೆಲಸದ  ಪರಾಕಾಷ್ಠೆಯ ಪ್ರತೀಕ. ಸಮಾಜದೆಡೆಗೆ ಆರ್.ಎಸ್.ಎಸ್, ಪ್ರಧಾನಿ ನರೆಂದ್ರ ಮೋದಿ ಅವರ ದೃಷ್ಟಿಕೋನ ದಾದ್ರಿ ಪ್ರಕರಣಕ್ಕೆ ಹೊಣೆ ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಹೇಳಿದ್ದಾರೆ. 
ಇಂತಹ ಘಟನೆಗಳು ನಡೆಯುವ ಸಮಾಜದಲ್ಲಿ ಬದುಕುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ ಎಂದು ಸಂದೀಪ್ ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT