ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜಕೀಯ

ತುಟಿಬಿಚ್ಚದವರಿಂದ ಯಾತ್ರೆ ನಾಟಕ: ಸಿದ್ದರಾಮಯ್ಯ

ಕಳಸಾಬಂಡೂರಿ, ಮಹದಾಯಿ, ಬರ ಪರಿಹಾರದ ಸಂಬಂಧ ಪ್ರಧಾನಿ ಮೋದಿಯವರ ಬಳಿ ಸರ್ವಪಕ್ಷಗಳ ನಿಯೋಗದಲ್ಲಿ ತೆರಳಿದಾಗ ಬಿಜೆಪಿಯ ಒಬ್ಬರೂ ತುಟಿ ಬಿಚ್ಚಲಿಲ್ಲ. ಈಗ ರೈತರ ಹೆಸರಿನಲ್ಲಿ ಯಾತ್ರೆ ಕೈಗೊಂಡು ನಾಟಕ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು...

ಹಾವೇರಿ: ಕಳಸಾಬಂಡೂರಿ, ಮಹದಾಯಿ, ಬರ ಪರಿಹಾರದ ಸಂಬಂಧ ಪ್ರಧಾನಿ ಮೋದಿಯವರ ಬಳಿ ಸರ್ವಪಕ್ಷಗಳ ನಿಯೋಗದಲ್ಲಿ ತೆರಳಿದಾಗ ಬಿಜೆಪಿಯ ಒಬ್ಬರೂ ತುಟಿ ಬಿಚ್ಚಲಿಲ್ಲ. ಈಗ ರೈತರ ಹೆಸರಿನಲ್ಲಿ ಯಾತ್ರೆ ಕೈಗೊಂಡು ನಾಟಕ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಮಂತ್ರಿ ಮಾಡಲಿಲ್ಲ ಎಂಬ ಕಾರಣಕ್ಕೆ ಯಡಿಯೂರಪ್ಪನವರಿಗೆ ಹತಾಶೆಯಾಗಿದೆ. ಪ್ರಧಾನಿ ಬಳಿಗೆ ನಿಯೋಗದಲ್ಲಿ ತೆರಳಿದಾಗ ಕಳಸಾಬಂಡೂರಿ, ಮಹದಾಯಿ ನದಿ ತಿರುವು ಯೋಜನೆ ಕುರಿತು ಮನವರಿಕೆ ಮಾಡಿಕೊಡಬಹುದಿತ್ತು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಬಹುದಿತ್ತು. ಆಗ ಸುಮ್ಮನಿದ್ದು ಈಗ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸುತ್ತಿರುವುದು ಕೇವಲ ನಾಟಕ ಎಂದು ಆರೋಪಿಸಿದರು.

ಗೋವಾದಲ್ಲಿ ಒಕ್ಕಲೆಬ್ಬಿಸಿರುವ 157 ಕನ್ನಡಿಗರ ಕುಟುಂಬಕ್ಕೆ ವಸತಿ ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಗೋವಾ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ. ಒಂದು ವೇಳೆ ಸಾಧ್ಯವಾಗದಿದ್ದರೆ ನಾವೇ ಮನೆ ನಿರ್ಮಿಸಿಕೊಡುವುದಾಗಿಯೂ ಪತ್ರದಲ್ಲಿ ತಿಳಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು. ಭೂಕಬಳಿಕೆ ಆರೋಪಕ್ಕೆ ಸಚಿವ ಆರ್.ವಿ. ದೇಶಪಾಂಡೆ ಅವರೇ ಉತ್ತರ ನೀಡಿದ್ದಾರೆ. ಅದು ಡಿಫರೆಸ್ಟ್ ಮಾಡಿದ ಜಮೀನಾಗಿದ್ದು, ದೇಶಪಾಂಡೆಯವರು ಖರೀದಿಸುವ ಮುನ್ನ ಐದಾರು ಕೈ ಬದಲಾವಣೆಯಾಗಿದೆ.

ಕುಮಾರಸ್ವಾಮಿಯವರಿಗೆ ಇಂಥ ಆರೋಪ ಮಾಡುವುದೇ ಕೆಲಸವಾಗಿದೆ ಎಂದು ಸಿದ್ದರಾಮಯ್ಯ ಕುಟುಕಿದರು. ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ದೆಹಲಿಗೆ ಹೋದಾಗ ರಾಹುಲ್ ಗಾಂಧಿ ಹಾಗೂ ದಿಗ್ವಿಜಯï ಸಿಂಗ್ ಅವರ ಭೇಟಿ ಸಾಧ್ಯವಾ ಗಲಿಲ್ಲ. ಅ. 9 ಮತ್ತು 10ರಂದು ರಾಹುಲ್ ಗಾಂಧಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅವರು ಬಂದು ಹೋದ ಬಳಿಕ ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ದೆಹಲಿಗೆ ಹೋಗುವುದಾಗಿ ಸಿದ್ದರಾಮಯ್ಯ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!