ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (ಸಂಗ್ರಹ ಚಿತ್ರ) 
ರಾಜಕೀಯ

ರಾಯಚೂರಿಗೇ ಬೇಕು ಐಐಟಿ: ಬಿಎಸ್ ವೈ

ಧಾರವಾಡಕ್ಕೆ ಐಐಟಿ ಮಂಜೂರಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಸಮರ್ಥಿಸಿಕೊಂಡಿದ್ದರೆ, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಯಚೂರಿಗೇ ಬೇಕು ಎಂದು ಪಟ್ಟುಹಿಡಿದಿದ್ದಾರೆ. ..

ಮಾನವಿ: ಧಾರವಾಡಕ್ಕೆ ಐಐಟಿ ಮಂಜೂರಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಸಮರ್ಥಿಸಿಕೊಂಡಿದ್ದರೆ, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಯಚೂರಿಗೇ ಬೇಕು ಎಂದು ಪಟ್ಟುಹಿಡಿದಿದ್ದಾರೆ.

ಬಿಜೆಪಿ ಶುಕ್ರವಾರ ಏರ್ಪಡಿಸಿದ್ದ ರೈತ ಚೈತನ್ಯ ಯಾತ್ರೆಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ``ಐಐಟಿ ಸ್ಥಾಪನೆ ವಿಷಯದಲ್ಲಿ ತಮ್ಮ ನಿಲುವು ಸ್ಪಷ್ಟ ಹಾಗೂ ಅಚಲ. ಡಿ.ಎಂ.  ನಂಜುಂಡಪ್ಪ ವರದಿಯನ್ವಯ ಹಿಂದುಳಿದ ರಾಯಚೂರು ಜಿಲ್ಲೆಯಲ್ಲೇ ಸ್ಥಾಪನೆಯಾಗಬೇಕು. ರಾಯಚೂರಿನಲ್ಲಿಲ್ಲೇ ಐಐಟಿ ಸ್ಥಾಪಿಸಬೇಕು ಎನ್ನುವುದು ಬಿಜೆಪಿ ಸರ್ಕಾರದಲ್ಲಿ ನಿರ್ಣಯ ಕೈ  ಗೊಳ್ಳಲಾಗಿತ್ತು'' ಎಂದು ಹೇಳಿದ್ದಾರೆ.

ಎರಡು ಜಿಲ್ಲೆಗಳ ನಡುವೆ ಐಐಟಿಗಾಗಿ ಬೆಂಕಿ ಹಚ್ಚಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರು 3 ಹೆಸರನ್ನು ಸೂಚಿಸಿ ಗೊಂದಲ ಸೃಷ್ಟಿಸಿದ್ದಾರೆ. ಯಾರು ದ್ರೋಹಿಗಳು ಎಂಬುದನ್ನು ಅರಿಯಲು ತಾಕತ್ತಿದ್ದರೆ ವಿಧಾನಮಂಡಲ ಅಧಿವೇಶನ ಕರೆಯಲಿ. ಪ್ರಧಾನಿ, ಮಾನವ ಸಂಪನ್ಮೂಲ ಸಚಿವೆಯನ್ನು ಮನವೊ ಲಿಸುವ ಜವಾಬ್ದಾರಿ ನಮ್ಮದು. ಇದಕ್ಕೂ ಮೊದಲು ರಾಜ್ಯ ಸರ್ಕಾರ  ರಾಯಚೂರಲ್ಲೇ ಐಐಟಿ ಸ್ಥಾಪಿಸುವ ಕುರಿತು ಕ್ಯಾಬಿನೆಟ್ ನಿರ್ಧಾರ ತೆಗೆದುಕೊಂಡು ಬದ್ಧತೆ ತೋರಲಿ. ರಾಯಚೂರಿನವರಿಗೆ ಒಂದು, ಧಾರವಾಡದವರಿಗೆ ಇನ್ನೊಂದು ರೀತಿ ಹೇಳಿ ಜಗಳ ಹಚ್ಚಿ  ಬೇಳೆ ಬೇಯಿಸಿ ಕೊಳ್ಳುವುದನ್ನು ಬಿಡಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!