ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜಕೀಯ

ಪ್ರಧಾನಿ ಬಳಿ ಮಾತನಾಡಲಾಗದ ಬಿಜೆಪಿ ನಾಯಕರಿಗೆ ಧಮ್ ಇಲ್ಲ: ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿ ಬಳಿ ಮಾತನಾಡಲಾಗದ ಬಿಜೆಪಿ ನಾಯಕರಿಗೆ ಧಮ್ ಇಲ್ಲ. ಹೀಗಾಗಿಯೇ ದೆಹಲಿಯಲ್ಲಿ ಮೌನವಹಿಸಿ ಇದೀಗ ಇಲ್ಲಿ ಬಂದು ಸುಖಾಸುಮ್ಮನೆ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ...

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಬಳಿ ಮಾತನಾಡಲಾಗದ ಬಿಜೆಪಿ ನಾಯಕರಿಗೆ ಧಮ್ ಇಲ್ಲ. ಹೀಗಾಗಿಯೇ ದೆಹಲಿಯಲ್ಲಿ ಮೌನವಹಿಸಿ ಇದೀಗ ಇಲ್ಲಿ ಬಂದು ಸುಖಾಸುಮ್ಮನೆ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಈ ಕುರಿತಂತೆ ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿರುವ ಅವರು, ಕಳಸಾ-ಬಂಡೂರಿ, ಮಹದಾಯಿ ಮತ್ತು ಮಲಪ್ರಭಾ ನದಿ ಜೋಡಣಾ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರದ ಬಳಿ ರಾಜ್ಯ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕೊಂಡೊಯ್ದಿತ್ತು. ಅಂದು ನಡೆದ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ನಾಯಕರು ಮಾತನಾಡಲಿಲ್ಲ. ಇಂದು ರಾಜ್ಯಕ್ಕೆ ಬಂದು ಜನರನ್ನು ಹಾದಿ ತಪ್ಪಿಸಲು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳಸಾ-ಬಂಡೂರಿ ವಿಷಯದಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆದು ಮಧ್ಯಸ್ಥಿಕೆ ವಹಿಸಬೇಕಾದ ಪ್ರಧಾನಿಯವರೇ ಮೊದಲು ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ನಡೆಸಿ ಎಂದು ಹೇಳುತ್ತಿರುವುದು ನಿಜಕ್ಕೂ ವಿಪರ್ಯಾಸ ಸಂಗತಿ. ನನ್ನ 40 ವರ್ಷದ ಇತಿಹಾಸದಲ್ಲಿ ಈ ರೀತಿ ಹೇಳುವ ಪ್ರಧಾನಿಯನ್ನೇ ನೋಡಿಯೇ ಇಲ್ಲ ಇದೇ ಮೊದಲು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ರಷ್ಯಾ ಬಿಟ್ಟು ವೆನೆಜುವೆಲಾದಿಂದ ಭಾರತ ತೈಲ ಖರೀದಿಸಲಿದೆ" - ಟ್ರಂಪ್ ಹೇಳಿಕೆ ಬಗ್ಗೆ ರಷ್ಯಾ ಹೇಳಿದ್ದೇನು?

ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ 2026: "ಸಂಪಾಯಿತಲೇ ಪರಾಕ್' ಭವಿಷ್ಯವಾಣಿ ನುಡಿದ ಗೊರವಯ್ಯ, ಏನಿದರ ಅರ್ಥ..?

Bengaluru-Pune ಹೈ–ಸ್ಪೀಡ್ ರೈಲು ಮಾರ್ಗಕ್ಕೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಆಂಥ್ರೊಪಿಕ್‌ನ ಹೊಸ AI ಟೂಲ್ ನಿಂದ ಭಾರತೀಯ ಐಟಿ ಷೇರುಗಳ ಕುಸಿತ

SCROLL FOR NEXT