ಸಿಎಂ ಸಿದ್ದರಾಮಯ್ಯ 
ರಾಜಕೀಯ

ಸಿದ್ದರಾಮಯ್ಯ ಸಿಎಂ ಆಗಿದ್ದು ಸಾಕು ನಮಗೆ ದಲಿತ ಸಿಎಂ ಬೇಕು: ರಾಹುಲ್ ಗಾಂಧಿಗೆ ಮನವಿ

ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ದಲಿತ ಮುಖಂಡರನ್ನು ಸಿಎಂ ಮಾಡಬೇಕೆಂಬ ಕೂಗು ಮತ್ತೆ ಕೇಳಿ ಬಂದಿದೆ...

ಹಾವೇರಿ: ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ದಲಿತ ಮುಖಂಡರನ್ನು ಸಿಎಂ ಮಾಡಬೇಕೆಂಬ ಕೂಗು ಮತ್ತೆ ಕೇಳಿ ಬಂದಿದೆ.  ಆ ನಿಟ್ಟಿನಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಚಲವಾದಿ ನಾರಾಯಣಸ್ವಾಮಿ ಮನವಿ ಪತ್ರ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯನವರ ಜನಪ್ರಿಯ ಯೋಜನೆಗಳಿಂದಾಗಿ ಪಕ್ಷಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ರಾಹುಲ್ ಗಾಂಧಿಗೆ ಸಲ್ಲಿಸಿರುವ ಪತ್ರದಲ್ಲಿ ಆರೋಪಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ, ಅಲ್ಲದೇ ಸಿಎಂ ಆಗಿ ಸಿದ್ದರಾಮಯ್ಯ ಎರಡೂವರೆ ವರ್ಷ ಕಾಲ ಕಳೆದಿದ್ದಾರೆ, ಇನ್ನು ಉಳಿದ ಎರಡೂ ವರೆ ವರ್ಷ ದಲಿತ ಸಿಎಂ ಬೇಕು ಎದು ಮನವಿ ಮಾಡಿದ್ದಾರೆ.

ಅಂಬೇಡ್ಕರ್ ಅವರ 125ನೇ ಜನ್ಮ ದಿನದಂದು ದಲಿತ ಸಿಎಂ ಅನ್ನು ನಿಯೋಜಿಸಬೇಕೆಂದು ಮನವಿ ಪತ್ರದಲ್ಲಿ ವಿನಂತಿಸಿಕೊಳ್ಳಲಾಗಿದೆ. ಮಲ್ಲಿಕಾರ್ಜುನ್ ಖರ್ಗೆ, ಪರಮೇಶ್ವರ್ ಯಾವುದೇ ದಲಿತ ಮುಖಂಡರಿಗೆ ಸಿಎಂ ಪಟ್ಟ ಕೊಡಬಹುದಾಗಿದೆ. ಅದಕ್ಕೂ ಮೊದಲು ಸಿಎಂ ಹುದ್ದೆಯಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯನ್ನು ನೇಮಕ ಮಾಡದಿದ್ದರೆ, ಕಾಂಗ್ರೆಸ್ ಪಕ್ಷ ದಲಿತರ ಆಕ್ರೋಶಕ್ಕೆ ಬಲಿಯಾಗಬೇಕಾಗುತ್ತದೆ ಎಂದು ಚಲವಾದಿ ಸಂಘಟನೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT