ಮಾಜಿ ಸಂಸದೆ ರಮ್ಯಾ 
ರಾಜಕೀಯ

ರಮ್ಯಾ ವಿರುದ್ಧ ಹೈಕಮಾಂಡ್ ಗೆ ದೂರು

ರೈತ ಲೋಕೇಶ್ ಕುಟುಂಬಕ್ಕೆ ಚೆಕ್ ಹಸ್ತಾಂತರಿುವ ವಿಚಾರದಲ್ಲಿ ಗೊಂದಲ ಸೃಷ್ಟಿಸಿರುವ ಮಾಜಿ ಸಂಸದೆ ರಮ್ಯಾ ನಡವಳಿಕೆ ಪಕ್ಷದಲ್ಲಿ ಅಸಮಾಧಾನ ಸೃಷ್ಟಿಸಿದೆ. ..

ಬೆಂಗಳೂರು: ಮಂಡ್ಯ ಜಿಲ್ಲೆಯ ಸಣಬದ ಕೊಪ್ಪಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ಲೋಕೇಶ್  ಕುಟುಂಬಕ್ಕೆ ಚೆಕ್ ಹಸ್ತಾಂತರಿುವ ವಿಚಾರದಲ್ಲಿ ಗೊಂದಲ ಸೃಷ್ಟಿಸಿರುವ ಮಾಜಿ ಸಂಸದೆ ರಮ್ಯಾ ನಡವಳಿಕೆ ಪಕ್ಷದಲ್ಲಿ ಅಸಮಾಧಾನ ಸೃಷ್ಟಿಸಿದೆ.

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕೇಶ್ ಪತ್ನಿಗೆ ನೀಡಿದ್ದ 1 ಲಕ್ಷ ಚೆಕ್ ವಾಪಸ್ ಪಡೆದ ಕ್ರಮದಿಂದ ಬೇಸತ್ತಿರುವ ಕುಟುಂಬ ಚೆಕ್ ಸ್ವೀಕರಿಸಲು ನಿರಾಕರಿಸಿದೆ.

ಮಂಡ್ಯದಲ್ಲಿ ರಾಹುಲ್ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಯಶವಂತಪುರ ಕಾಂಗ್ರೆಸ್ ಶಾಸಕ ಎಸ್. ಟಿ, ಸೋಮಶೇಖರ್ ಬೆಂಗಳೂರಿನಲ್ಲಿ ಸೋಮವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ರನ್ನು ಭೇಟಿಯಾಗಿ ಚೆಕ್ ಹಸ್ತಾಂತರದ ರಾದ್ದಾಂತ ಕುರಿತು ಮಾಹಿತಿ ನೀಡಿದ್ದಾರೆ. ಹೀಗಾಗಿ ಪ್ರಕರಣ ಹೈಕಮಾಂಡ್ ತಲುಪಿದ್ದು ಸದ್ಯದಲ್ಲೇ ರಾಹುಲ್ ಗೆ ವರದಿ ಸಲ್ಲಿಕೆಯಾಗಲಿದೆ. ಕ್ರಮ ಕೈಗೊಳ್ಳಲು ದೂರು ನೀಡಿದ್ದಾಗೆ ಸೋಮಶೇಖರ್ ತಿಳಿಸಿದ್ದಾರೆ.

ಘಟನೆ ಏನು?: ರೂ. 1 ಲಕ್ಷ ಮೊತ್ತದ ಕೆಪಿಸಿಸಿ ಚೆಕ್ ಅನ್ನು ಲೋಕೇಶ್ ಪತ್ನಿಗೆ ರಾಹುಲ್ ನೀಡಿದ್ದರು. ಅದನ್ನು ಗಲಿಬಿಲಿಯಲ್ಲಿ ಜಗುಲಿಯಲ್ಲೇ ಬಿಟ್ಟಿದ್ದರು. ಇದನ್ನು ಗಮನಿಸಿದ ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಅವರು, ಆ ಚೆಕ್  ತೆಗೆದುಕೊಂಡು ಸಂಸದ ಪುಟ್ಟರಾಜು ಕೈಗೆ ಕೊಟ್ಟು ಲೋಕೇಶ್ ಪತ್ನಿ ಖಾತೆಗೆ ಜಮಾ ಮಾಡಿಸುವಂತೆ ಸೂಚಿಸಿದ್ದರು. ಇದಕ್ಕೆ ಮಾಜಿ ಸಂಸದೆ ರಮ್ಯಾ ಆಕ್ಷೇಪ ವ್ಯಕ್ತ ಪಡಿಸಿ, ಆ ಚೆಕ್ ಅನ್ನು ವಾಪಸ್ ತರಿಸಿದ್ದರು. ಆದೀಗ ಕೆಪಿಸಿಸಿಯಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT