ಭೂ ಕಬಳಿಕೆ ಹೋರಾಟ ಸಮಿತಿಯಿಂದ ಕಬ್ಬನ್‍ ಪಾರ್ಕ್ ನ ಸಚಿವಾಲಯ ಕ್ಲಬ್‍ನಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ದೇವೇಗೌಡರು ಚಾಲನೆ ನೀಡುತ್ತಿರುವುದು (ಕೃಪೆ : ನಾಗೇಶ್ ಪೊಳಲಿ) 
ರಾಜಕೀಯ

ನಾವೇ ಆರಂಭಿಸಿದ ಸಂಸ್ಥೆಗೆ ನಾನೇ ಆರೋಪಿ

ಲೋಕಾಯುಕ್ತ ಸಂಸ್ಥೆಗೆ ನ್ಯಾ.ಸಂತೋಷ್ ಹೆಗ್ಡೆ ಅವರಂತಹ ದಕ್ಷ ಅಧಿಕಾರಿಗಳು ಮುಂದಿನ ದಿನಗಳಲ್ಲಿ ನೇಮಕಗೊಳ್ಳುವುದು ನಿಶ್ಚಿತವಿಲ್ಲ...

ಬೆಂಗಳೂರು:  ಲೋಕಾಯುಕ್ತ ಸಂಸ್ಥೆಗೆ ನ್ಯಾ.ಸಂತೋಷ್ ಹೆಗ್ಡೆ ಅವರಂತಹ ದಕ್ಷ ಅಧಿಕಾರಿಗಳು ಮುಂದಿನ ದಿನಗಳಲ್ಲಿ ನೇಮಕಗೊಳ್ಳುವುದು ನಿಶ್ಚಿತವಿಲ್ಲ ಎಂದು ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡರು ಅನುಮಾನ ವ್ಯಕ್ತಪಡಿಸಿದ್ದು, ನಮ್ಮ ಕಾಲದಲ್ಲಿ ಹುಟ್ಟು ಹಾಕಿದ ಆ ಸಂಸ್ಥೆಗೆ ನಾನೇ ಮೊದಲ ಆರೋಪಿ ಎಂದಿದ್ದಾರೆ. ಭೂ ಕಬಳಿಕೆ ಹೋರಾಟ ಸಮಿತಿಯಿಂದ ಕಬ್ಬನ್‍ ಪಾರ್ಕ್ ನ ಸಚಿವಾಲಯ ಕ್ಲಬ್‍ನಲ್ಲಿ ಭಾನುವಾರ ಏರ್ಪಡಿಸಿದ್ದ  ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಲೋಕಾಯುಕ್ತ ಸಂಸ್ಥೆ ಅಸ್ತಿತ್ವಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ ಎಲ್ಲವನ್ನೂ ಗಮನಿಸಿದ್ದೇನೆ. ಅಲ್ಲಿ ಯಾರ್ಯಾರು ಬಂದು ಹೋದರು, ಕಾಯ್ದೆಯಲ್ಲಿ ಆದ ಬದಲಾವಣೆ ಎಲ್ಲವೂ ತಿಳಿದಿದೆ. ಮೊದಲ ಆರೋಪಿಯಾಗಿ ಹೋದಾಗ  ಸಂಸ್ಥೆಯಿಂದ ಸಾಕಷ್ಟು ಕಹಿ ಉಂಡಿದ್ದೆ. ಆದರೂ ಆ ಸಂಸ್ಥೆಯಲ್ಲಿ ಅತ್ಯಂತ ಶ್ರೇಷ್ಠ ಕೆಲಸ ಮಾಡಿದ ಒಬ್ಬ ವ್ಯಕ್ತಿದೃಷ್ಟಿಯಲ್ಲಿದ್ದರೆ ಅದು ಸಂತೋಷ್ ಹೆಗ್ಡೆ. ಅಂತಹ ವ್ಯಕ್ತಿ ಮತ್ತೆ ಆ ಹುದ್ದೆ ಏರುವುದು ಅನುಮಾನ ಎಂದರು. ನ್ಯಾ.ಸಂತೋಷ್ ಹೆಗ್ಡೆ ಅವರ ವರದಿಯಿಂದ ಕೆಲವರು ಜೈಲಿಗೆ ಹೋಗಿರಬಹುದು. ಆದರೆ ರಾಜಕೀಯದಲ್ಲಿ ಹೆಚ್ಚಾಗಿ ಯಾರೂ ಜೈಲಿಗೆ ಹೋಗುವುದಿಲ್ಲ. ಈ ಎಲ್ಲವನ್ನೂ ಸೂಕ್ಷ್ಮವಾಗಿ ನೋಡಿದ್ದೇನೆ. ವ್ಯವಸ್ಥೆ ಕೆಟ್ಟು ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನೀರು ಬಿಟ್ಟರೆ ಹೇಗೆ?: ಕನ್ನಡಿಗರಿಗೇ ಕುಡಿಯಲು ನೀರಿಲ್ಲ. ಹೀಗಿರುವಾಗ ತಮಿಳುನಾಡಿಗೆ ನೀರು ಬಿಡಿ ಎಂದರೆ ಹೇಗೆ ಸಾಧ್ಯ? ಈ ತೀರ್ಪು ಸರಿಯಲ್ಲ ಎಂದು ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನತೆಗೆ ಕುಡಿಯಲು ನೀರಿಲ್ಲ ಎಂದು `ಶಂಖ' ಹೊಡೆದರೂ ಕೇಳುತ್ತಿಲ್ಲ. ಬೆಂಗಳೂರಿನ ಮುಕ್ಕಾಲು ಲಭಾಗದಷ್ಟು ಜನರಿಗೆ ಕುಡಿಯುವ ನೀರಿಗೆ ಅರ್ಹತೆ ಇಲ್ಲ ಎಂದು ಬರೆಯುವ ಜಡ್ಜ್‍ಗಳು ಏನು ಹೇಳಬೇಕೋ ತಿಳಿಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು. ತೀರ್ಪಿನ ಮೆರಿಟ್ ಬಗ್ಗೆ ಟೀಕೆ ಮಾಡುತ್ತಿದ್ದೇನೆ ಹೊರತು
ವೈಯಕ್ತಿಕವಾಗಿ ಯಾರನ್ನೂ ದೂಷಿಸುವುದು ನನ್ನ ಉದ್ದೇಶವಲ್ಲ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!