ಭೂ ಕಬಳಿಕೆ ಹೋರಾಟ ಸಮಿತಿಯಿಂದ ಕಬ್ಬನ್‍ ಪಾರ್ಕ್ ನ ಸಚಿವಾಲಯ ಕ್ಲಬ್‍ನಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ದೇವೇಗೌಡರು ಚಾಲನೆ ನೀಡುತ್ತಿರುವುದು (ಕೃಪೆ : ನಾಗೇಶ್ ಪೊಳಲಿ) 
ರಾಜಕೀಯ

ನಾವೇ ಆರಂಭಿಸಿದ ಸಂಸ್ಥೆಗೆ ನಾನೇ ಆರೋಪಿ

ಲೋಕಾಯುಕ್ತ ಸಂಸ್ಥೆಗೆ ನ್ಯಾ.ಸಂತೋಷ್ ಹೆಗ್ಡೆ ಅವರಂತಹ ದಕ್ಷ ಅಧಿಕಾರಿಗಳು ಮುಂದಿನ ದಿನಗಳಲ್ಲಿ ನೇಮಕಗೊಳ್ಳುವುದು ನಿಶ್ಚಿತವಿಲ್ಲ...

ಬೆಂಗಳೂರು:  ಲೋಕಾಯುಕ್ತ ಸಂಸ್ಥೆಗೆ ನ್ಯಾ.ಸಂತೋಷ್ ಹೆಗ್ಡೆ ಅವರಂತಹ ದಕ್ಷ ಅಧಿಕಾರಿಗಳು ಮುಂದಿನ ದಿನಗಳಲ್ಲಿ ನೇಮಕಗೊಳ್ಳುವುದು ನಿಶ್ಚಿತವಿಲ್ಲ ಎಂದು ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡರು ಅನುಮಾನ ವ್ಯಕ್ತಪಡಿಸಿದ್ದು, ನಮ್ಮ ಕಾಲದಲ್ಲಿ ಹುಟ್ಟು ಹಾಕಿದ ಆ ಸಂಸ್ಥೆಗೆ ನಾನೇ ಮೊದಲ ಆರೋಪಿ ಎಂದಿದ್ದಾರೆ. ಭೂ ಕಬಳಿಕೆ ಹೋರಾಟ ಸಮಿತಿಯಿಂದ ಕಬ್ಬನ್‍ ಪಾರ್ಕ್ ನ ಸಚಿವಾಲಯ ಕ್ಲಬ್‍ನಲ್ಲಿ ಭಾನುವಾರ ಏರ್ಪಡಿಸಿದ್ದ  ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಲೋಕಾಯುಕ್ತ ಸಂಸ್ಥೆ ಅಸ್ತಿತ್ವಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ ಎಲ್ಲವನ್ನೂ ಗಮನಿಸಿದ್ದೇನೆ. ಅಲ್ಲಿ ಯಾರ್ಯಾರು ಬಂದು ಹೋದರು, ಕಾಯ್ದೆಯಲ್ಲಿ ಆದ ಬದಲಾವಣೆ ಎಲ್ಲವೂ ತಿಳಿದಿದೆ. ಮೊದಲ ಆರೋಪಿಯಾಗಿ ಹೋದಾಗ  ಸಂಸ್ಥೆಯಿಂದ ಸಾಕಷ್ಟು ಕಹಿ ಉಂಡಿದ್ದೆ. ಆದರೂ ಆ ಸಂಸ್ಥೆಯಲ್ಲಿ ಅತ್ಯಂತ ಶ್ರೇಷ್ಠ ಕೆಲಸ ಮಾಡಿದ ಒಬ್ಬ ವ್ಯಕ್ತಿದೃಷ್ಟಿಯಲ್ಲಿದ್ದರೆ ಅದು ಸಂತೋಷ್ ಹೆಗ್ಡೆ. ಅಂತಹ ವ್ಯಕ್ತಿ ಮತ್ತೆ ಆ ಹುದ್ದೆ ಏರುವುದು ಅನುಮಾನ ಎಂದರು. ನ್ಯಾ.ಸಂತೋಷ್ ಹೆಗ್ಡೆ ಅವರ ವರದಿಯಿಂದ ಕೆಲವರು ಜೈಲಿಗೆ ಹೋಗಿರಬಹುದು. ಆದರೆ ರಾಜಕೀಯದಲ್ಲಿ ಹೆಚ್ಚಾಗಿ ಯಾರೂ ಜೈಲಿಗೆ ಹೋಗುವುದಿಲ್ಲ. ಈ ಎಲ್ಲವನ್ನೂ ಸೂಕ್ಷ್ಮವಾಗಿ ನೋಡಿದ್ದೇನೆ. ವ್ಯವಸ್ಥೆ ಕೆಟ್ಟು ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನೀರು ಬಿಟ್ಟರೆ ಹೇಗೆ?: ಕನ್ನಡಿಗರಿಗೇ ಕುಡಿಯಲು ನೀರಿಲ್ಲ. ಹೀಗಿರುವಾಗ ತಮಿಳುನಾಡಿಗೆ ನೀರು ಬಿಡಿ ಎಂದರೆ ಹೇಗೆ ಸಾಧ್ಯ? ಈ ತೀರ್ಪು ಸರಿಯಲ್ಲ ಎಂದು ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನತೆಗೆ ಕುಡಿಯಲು ನೀರಿಲ್ಲ ಎಂದು `ಶಂಖ' ಹೊಡೆದರೂ ಕೇಳುತ್ತಿಲ್ಲ. ಬೆಂಗಳೂರಿನ ಮುಕ್ಕಾಲು ಲಭಾಗದಷ್ಟು ಜನರಿಗೆ ಕುಡಿಯುವ ನೀರಿಗೆ ಅರ್ಹತೆ ಇಲ್ಲ ಎಂದು ಬರೆಯುವ ಜಡ್ಜ್‍ಗಳು ಏನು ಹೇಳಬೇಕೋ ತಿಳಿಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು. ತೀರ್ಪಿನ ಮೆರಿಟ್ ಬಗ್ಗೆ ಟೀಕೆ ಮಾಡುತ್ತಿದ್ದೇನೆ ಹೊರತು
ವೈಯಕ್ತಿಕವಾಗಿ ಯಾರನ್ನೂ ದೂಷಿಸುವುದು ನನ್ನ ಉದ್ದೇಶವಲ್ಲ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT