ಅಮಿತ್ ಶಾ 
ರಾಜಕೀಯ

ದಾದ್ರಿ, ಕಲ್ಬುರ್ಗಿ ಹತ್ಯೆ ಪ್ರಕರಣಗಳಿಗೆ ರಾಜ್ಯ ಸರ್ಕಾರಗಳೇ ಹೊಣೆ: ಅಮಿತ್ ಶಾ

ಸಾಹಿತಿಗಳ ಪ್ರತಿಭಟನೆಗೆ ಕಾರಣವಾಗಿರುವ ಕರ್ನಾಟಕದ ಸಾಹಿತಿ ಕಲ್ಬುರ್ಗಿ ಹತ್ಯೆ ಹಾಗೂ ದಾದ್ರಿಯ ಪ್ರಕರಣಗಳಿಗೆ ಕೇಂದ್ರ ಸರ್ಕಾರ ಹೊಣೆಯಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಪಾಟ್ನಾ: ಸಾಹಿತಿಗಳ ಪ್ರತಿಭಟನೆಗೆ ಕಾರಣವಾಗಿರುವ ಕರ್ನಾಟಕದ ಸಾಹಿತಿ ಕಲ್ಬುರ್ಗಿ ಹತ್ಯೆ ಹಾಗೂ ದಾದ್ರಿಯ ಪ್ರಕರಣಗಳಿಗೆ ಕೇಂದ್ರ ಸರ್ಕಾರ ಹೊಣೆಯಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಬಿಹಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ, ಸಾಹಿತಿಗಳ ಪ್ರತಿಭಟನೆಗೆ ಕಾರಣವಾಗಿರುವ ಎರಡೂ ಪ್ರಕರಣಗಳು ನಡೆದಿರುವುದು ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ. ಆದ್ದರಿಂದ ಬಿಜೆಪಿಯನ್ನು ದೂರಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಧಿಕಾರದಲ್ಲಿವೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಿರುವುದು ರಾಜ್ಯ ಸರ್ಕಾರಗಳ ಕಾರಣವಾದ್ದರಿಂದ ಕೇಂದ್ರ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ ಎಂದಿದ್ದಾರೆ ಅಮಿತ್ ಶಾ. 
ಮೀಸಲಾತಿ ಬಗ್ಗೆಯೂ ಸ್ಪಷ್ಟನೆ ನೀಡಿರುವ ಅಮಿತ್ ಶಾ, ಪ್ರಸ್ತುತ ಇರುವ ಮೀಸಲಾತಿ ವ್ಯವಸ್ಥೆಯನ್ನು ಬಿಜೆಪಿ ಬೆಂಬಲಿಸುತ್ತದೆ ಎಂದಿದ್ದಾರೆ. ಮೀಸಲಾತಿ ನಿಯಮಗಳನ್ನು ಮತ್ತೆ ಪರಿಶೀಲನೆ ನಡೆಸಬೇಕಿದೆ ಎಂದು ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಈ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT