ಎಸ್‍ಐ ಜಗದೀಶ್ 
ರಾಜಕೀಯ

ಎಸ್‍ಐ ಜಗದೀಶ್ ರಿವಾಲ್ವರ್ ಪತ್ತೆ

ದೊಡ್ಡಬಳ್ಳಾಪುರ ಟೌನ್ ಎಸ್ಸೈ ಜಗದೀಶ ಹಂತಕರಾದ ಹರೀಶ್ ಬಾಬು ಹಾಗೂ ಮಧು ಕೃತ್ಯಕ್ಕೆ ಬಳಸಿದ್ದ ಚಾಕು, ಧರಿಸಿದ್ದ ಬಟ್ಟೆ ಹಾಗೂ ಜಗದೀಶ್ ...

ಬೆಂಗಳೂರು: ದೊಡ್ಡಬಳ್ಳಾಪುರ ಟೌನ್ ಎಸ್ಸೈ ಜಗದೀಶ ಹಂತಕರಾದ ಹರೀಶ್ ಬಾಬು ಹಾಗೂ ಮಧು ಕೃತ್ಯಕ್ಕೆ ಬಳಸಿದ್ದ ಚಾಕು, ಧರಿಸಿದ್ದ ಬಟ್ಟೆ ಹಾಗೂ ಜಗದೀಶ್ ಅವರಿಂದ ಕಿತ್ತುಕೊಂಡು ಹೋಗಿದ್ದ ರಿವಾಲ್ವಾರ್‍ನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ನಾಗಪುರ ರೈಲು ನಿಲ್ದಾಣದಲ್ಲಿ ಅಲ್ಲಿಯ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದಿದ್ದ ಮಧು ಹಾಗೂ ಹರೀಶ್  ಬಾಬುನನ್ನು ಬುಧವಾರ ರಾತ್ರಿ ನಗರಕ್ಕೆ ಕರೆತಂದ ರಾಜ್ಯ ಪೊಲೀಸರು, ಗುರುವಾರ ಬೆಳಗ್ಗೆ ನೆಲಮಂಗಲ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ವಿ. ಪ್ರಕಾಶ ಅವರ ಮನೆಗೆ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗೆ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಮಾಡಿದ ಮನವಿಗೆ ಒಪ್ಪಿದ ನ್ಯಾಯಧೀಶರು 14 ದಿನ ಪೊಲೀಸರ ವಶಕ್ಕೆ ಒಪ್ಪಿಸಿ
ಆದೇಶಿಸಿದರು. ಬಂಧಿತರ ಹೇಳಿಕೆ ಆಧರಿಸಿ ಗುರುವಾರವೇ ಆಂಧ್ರಪ್ರದೇಶದ ಕರ್ನೂಲಿಗೆ ತೆರಳಿ ಚಿನ್ನಾಭರಣ ವ್ಯಾಪಾರಿ ಹನುಮಂತರಾಮು ಎಂಬಾತನ ಮನೆಯಲ್ಲಿದ್ದ ರಿವಾಲ್ವಾರ್,
ಚಾಕು ಹಾಗೂ ಆರೋಪಿಗಳ ಬಟ್ಟೆಗಳನ್ನು ಜಪ್ತಿ ಮಾಡಿದ್ದಾರೆ. ವಿಚಾರಣೆಗಾಗಿ ಆತನನ್ನೂ ವಶಕ್ಕೆ ಪಡೆದಿದ್ದಾರೆ. 
ಇರಿದಿದ್ದು ಹರೀಶ್ ಬಾಬು: ಬಂಧಿಸಲು ಮುಂದಾದ ಎಸ್ಸೈ ಜಗದೀಶ್ ಅವರಿಗೆ ಚಾಕುವಿನಿಂದ ಇರಿದಿದ್ದು ಹರೀಶ ಬಾಬುಎಂಬುದು ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT