ರಾಹುಲ್ ಗಾಂಧಿ(ಸಂಗ್ರಹ ಚಿತ್ರ) 
ರಾಜಕೀಯ

ದಲಿತ ಸಿಎಂ: ರಾಹುಲ್ ಗಾಂಧಿಗೆ ಪತ್ರ

ಸಂಪುಟ ವಿಸ್ತರಣೆ ಕಸರತ್ತು ಚುರುಕಾಗುತ್ತಿದ್ದಂತೆ ದಲಿತರಿಗೆ ಸಿಎಂ ಸ್ಥಾನ ನೀಡಬೇಕೆಂದು ಕೆಪಿಸಿಸಿ ಕಾರ್ಯದರ್ಶಿ ಛಲವಾದಿ ನಾರಾಯಣಸ್ವಾಮೀ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು: ಸಂಪುಟ ವಿಸ್ತರಣೆ ಕಸರತ್ತು ಚುರುಕಾಗುತ್ತಿದ್ದಂತೆ ದಲಿತರಿಗೆ ಸಿಎಂ ಸ್ಥಾನ ನೀಡಬೇಕೆಂದು ಕೆಪಿಸಿಸಿ ಕಾರ್ಯದರ್ಶಿ ಛಲವಾದಿ ನಾರಾಯಣಸ್ವಾಮಿ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.
ಈ ಹಿಂದೆ ದಲಿತ ನಾಯಕರಾದ ಬಸವಲಿಂಗಪ್ಪ ಮತ್ತು ಕೆಹೆಚ್ ರಂಗನಾಥ್ ರನ್ನು ಕಾಂಗ್ರೆಸ್ ಸಿಎಂ ಮಾಡಲಿಲ್ಲ ಎನ್ನುವ ಬಗ್ಗೆ ದಲಿತರಿಗೆ ಆಕ್ರೋಶವಿದೆ. ಅದನ್ನು ಶಮನಗೊಳಿಸಿ ಮುಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ ಬೆಂಬಲಿಸುವಂತಾಗಲು ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಅಥವಾ ಡಾ.ಜಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಜೆಡಿಎಸ್ ನಿಂದ ಹೊರಬಂದಾಗ, ಅಂದು ಪ್ರತಿಪಕ್ಷ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನವನ್ನು ಸಿದ್ದರಾಮಯ್ಯ ಅವರಿಗೆ ತ್ಯಾಗ ಮಾಡಿದರು. ಅದೇ ರೀತಿ ಕಳೆದ ಚುನಾವಣೆಯಲ್ಲಿ ದಲಿತರ ಮತಗಳನ್ನು ಸೆಳೆಯುವಲ್ಲಿ ಡಾ.ಪರಮೇಶ್ವರ್ ಯಶಸ್ವಿಯಾಗಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಈಗಾಗಲೇ ಎರಡೂವರೆ ವರ್ಷ ಅಧಿಕಾರ ಅನುಭವಿಸಿದ್ದಾರೆ. ಇನ್ನುಳಿದ ಅವಧಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!