ಜಿ. ಪರಮೇಶ್ವರ (ಸಂಗ್ರಹ ಚಿತ್ರ) 
ರಾಜಕೀಯ

ಸಾರ್ಥಕ ಸಮಾವೇಶದಲ್ಲಿ ಪರಮೇಶ್ವರ ಕಣ್ಣೀರಿಟ್ಟಿದ್ದೇಕೆ?

ಕೆಪಿಸಿಸಿ ಅಧ್ಯಕ್ಷ ಹಾಗೂ ನಿನ್ನೆಯಷ್ಟೇ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಜಿ.ಪರಮೇಶ್ವರ ಅವರು ಶುಕ್ರವಾರ ದಲಿತರ ಮೇಲಿನ...

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ನಿನ್ನೆಯಷ್ಟೇ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಜಿ.ಪರಮೇಶ್ವರ ಅವರು ಶುಕ್ರವಾರ ದಲಿತರ ಮೇಲಿನ ದೌರ್ಜನ ನೆನೆದು ಕಣ್ಣೀರಿಟ್ಟರು.

ಇಂದು ಅರಮನೆ ಮೈದಾನದಲ್ಲಿ ನಡೆದ ಸಾರ್ಥಕ ಸಮಾವೇಶದಲ್ಲಿ ಮಾತನಾಡಿದ ಸಚಿವ ಪರಮೇಶ್ವರ, ನಾನು ದಲಿತ ಕುಟುಂಬದಿಂದ ಬಂದವನು, ಸಾಮಾಜಿಕ ನ್ಯಾಯ ಪರಿಕಲ್ಪನೆ ನನ್ನ ರಕ್ತದಲ್ಲಿಯೇ ಇದೆ ಎಂದರು.

ದಲಿತರ ಮೇಲಿನ ದೌರ್ಜನ್ಯ ನೆನೆದು ಭಾವುಕರಾದ ಪರಮೇಶ್ವರ ಅವರು, ನಾನು ಚಿಕ್ಕ ವಯಸ್ಸಿನಲ್ಲಿ ಸಾಕಷ್ಟು ನೋವು ಅನುಭವಿಸಿದ್ದೇನೆ. ಕುಡಿಯುವ ನೀರಿನ ವಿಚಾರದಲ್ಲಿ ಅವಮಾನ ಅನುಭವಿಸಿದ್ದೇನೆ. ಶಾಲಾ ದಿನಗಳಲ್ಲಿ ಕುಡಿಯುವ ನೀರು ಕೇಳಿದ್ರೆ ಎತ್ತರದಿಂದ ಹಾಕುತ್ತಿದ್ದರು ಎಂದು ನೋವಿನಿಂದ ಹೇಳಿದರು.

ಈಗಲೂ ಸಹ ಕ್ಷೌರಿಕರ ಅಂಗಡಿಯಲ್ಲಿ ದಲಿತರಿಗೆ ಕ್ಷೌರ ಮಾಡಲ್ಲ. ನನ್ನ ತಂದೆ ಸ್ವತಃ ನನ್ನ ಕ್ಷೌರ ಮಾಡುತ್ತಿದ್ದರು ಎಂದು ಪರಮೇಶ್ವರ ಹೇಳಿದರು.

'ಸಾರ್ಥಕ ಸಮಾವೇಶ'ದ ಮೂಲಕ ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ಪರಮೇಶ್ವರ ಅವರನ್ನು ಅಭಿನಂದಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT