ಜಗದೀಶ ಶೆಟ್ಟರ್ 
ರಾಜಕೀಯ

ಮುಖ್ಯಮಂತ್ರಿ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧ: ಜಗದೀಶ ಶೆಟ್ಟರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋಮಾಂಸ ಭಕ್ಷಣೆ ಕುರಿತು ನೀಡಿದ ಹೇಳಿಕೆ ವಿರುದ್ಧ ಕಾನೂನು ಹೋರಾಟ ನಡೆಸಲಿದ್ದೇವೆ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋಮಾಂಸ ಭಕ್ಷಣೆ ಕುರಿತು ನೀಡಿದ ಹೇಳಿಕೆ ವಿರುದ್ಧ ಕಾನೂನು ಹೋರಾಟ ನಡೆಸಲಿದ್ದೇವೆ ಎಂದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿ ದ ಅವರು, ಮತಬ್ಯಾಂಕ್ ರಾಜಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ನಂಬಿಕೆಗೆ ದ್ರೋಹ ಬಗೆಯುವ ಮಾತನಾಡಿದ್ದಾರೆ. ಪ್ರತಿ ಧರ್ಮದ ಜನರಿಗೆ ಅವರದ್ದೇ ಆದ ನಂಬಿಕೆಗಳಿವೆ. ಆ ನಂಬಿಕೆಗೆ ದ್ರೋಹ ಬಗೆಯುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ರಾಜಕೀಯ ಹೋರಾಟ ಮಾಡಲಾಗುವುದು.
ಪಕ್ಷದಲ್ಲಿ ಕೆಲವರು ಕಾನೂನು ಹೋರಾಟವನ್ನೂ ಮಾಡಲಿದ್ದಾರೆ. ಈ ಬಗ್ಗೆ ಕಾನೂನು ಪರಿಣಿತರ ಬಳಿ ಚರ್ಚಿಸಲಿದ್ದೇವೆ ಎಂದರು.ಮುಖ್ಯಮಂತ್ರಿಯಾದವರು ಎಲ್ಲ ಸಮಾಜದ, ವರ್ಗದ ನಾಯಕರಾಗಿರುತ್ತಾರೆ. ಇಂತಹ ಹೇಳಿಕೆ ನೀಡಿ, ಒಂದು ವರ್ಗವನ್ನು ಓಲೈಸಿ ಅಧಿಕಾರದಲ್ಲಿ ಮುಂದುವರಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯತ್ನಿಸುತ್ತಿದ್ದಾರೆ ಎಂದು ಶೆಟ್ಟರ್  ವ್ಯಂಗ್ಯವಾಡಿದರು.
ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಮಾತನಾಡಿ, ಮಹಾತ್ಮಾ ಗಾಂಧಿ ಗೋವಿನ ಬಗ್ಗೆ ಪೂಜ್ಯ ಭಾವನೆ ಹೊಂದಿದ್ದರು. ಇಂದು ಕಾಂಗ್ರೆಸ್ಸಿನಲ್ಲಿರುವವರು ನಕಲಿ ಗಾಂಧಿವಾದಿಗಳಾಗಿರುವುದರಿಂದ ಇದನ್ನು ಎಲ್ಲರೂ ಮರೆತಿದ್ದಾರೆ. ದೇಶದಲ್ಲಿ ಕೋಟ್ಯಂತರ ಜನ ಗೋವಿನ ಬಗ್ಗೆ ಪೂಜ್ಯ ಭಾವನೆ ಹೊಂದಿದ್ದಾರೆ. ಮುಖ್ಯಮಂತ್ರಿಗಳು ಜನರ ಮನಸ್ಸಿಗೆ ನೋವು ಮಾಡುವುದಕ್ಕಿಂತ
ಮತ ಸಿಗುವುದನ್ನೇ ಮುಖ್ಯ ಎಂಬ ನಿಲುವು ತಳೆದಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT