ಕೆಪಿಸಿಸಿ ಸಭೆಯಲ್ಲಿ ಅಧ್ಯಕ್ಷ ಜಿ.ಪರಮೇಶ್ವರ 
ರಾಜಕೀಯ

ಬರ: ಹೈಕಮಾಂಡ್‍ಗೆ "ಕೈ" ವರದಿ

ಬರ ಪರಿಸ್ಥಿತಿ ಬಗ್ಗೆ ಎಐಸಿಸಿಗೆ ವರದಿ ನೀಡಲು ಸೋಮವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು: ಬರ ಪರಿಸ್ಥಿತಿ ಬಗ್ಗೆ ಎಐಸಿಸಿಗೆ ವರದಿ ನೀಡಲು ಸೋಮವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿಪರಮೇಶ್ವರ ಅವರು ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವರದಿಕೊಡುವಂತೆ ಸೂಚಿಸಿದ್ದಾರೆ. ಲೋಕಸಭಾ ಕಲಾಪದಲ್ಲಿ  ಅವರುಈ ವಿಚಾರ ಪ್ರಸ್ತಾಪ ಮಾಡಿ ಕೇಂದ್ರದ ಗಮನ ಸೆಳೆಯಲಿದ್ದಾರೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಪದಾಧಿಕಾರಿಗಳು ಪ್ರತಿ ಜಿಲ್ಲೆಯಲ್ಲಿ ಸಕ್ರಿಯರಾಗಿ ಮಾಹಿತಿ ಸಂಗ್ರಹಿಸಿ ಕೆಪಿಸಿಸಿಗೆ ವರದಿ ನೀಡಬೇಕು. ನಾವು ಈ ಮಾಹಿತಿಯನ್ನು ವರಿಷ್ಠರಿಗೆ ರವಾನೆ ಮಾಡಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಸಮರ್ಪಕವಾಗಿ ನಡೆದಿಲ್ಲ.  ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಈಗ ಸದಸ್ಯತ್ವ ನೋಂದಣಿ ಜವಾಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಎಲ್ಲರೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ಸಲಹೆ ನೀಡಿದರು.

ರಮೇಶ್ ವಿರುದ್ಧ ಆಕ್ರೋಶ: ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಪಿ. ರಮೇಶ್ ಅವರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಯಿತು. ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ಸೋಲಿಗೆ ಅವರು  ಬೆಂಬಲ ನೀಡಿದ್ದಾರೆ. ಹೀಗಾಗಿ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂಬ ಆಗ್ರಹ ವ್ಯಕ್ತವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT