ಕೆಪಿಸಿಸಿ ಸಭೆಯಲ್ಲಿ ಅಧ್ಯಕ್ಷ ಜಿ.ಪರಮೇಶ್ವರ 
ರಾಜಕೀಯ

ಬರ: ಹೈಕಮಾಂಡ್‍ಗೆ "ಕೈ" ವರದಿ

ಬರ ಪರಿಸ್ಥಿತಿ ಬಗ್ಗೆ ಎಐಸಿಸಿಗೆ ವರದಿ ನೀಡಲು ಸೋಮವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು: ಬರ ಪರಿಸ್ಥಿತಿ ಬಗ್ಗೆ ಎಐಸಿಸಿಗೆ ವರದಿ ನೀಡಲು ಸೋಮವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿಪರಮೇಶ್ವರ ಅವರು ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವರದಿಕೊಡುವಂತೆ ಸೂಚಿಸಿದ್ದಾರೆ. ಲೋಕಸಭಾ ಕಲಾಪದಲ್ಲಿ  ಅವರುಈ ವಿಚಾರ ಪ್ರಸ್ತಾಪ ಮಾಡಿ ಕೇಂದ್ರದ ಗಮನ ಸೆಳೆಯಲಿದ್ದಾರೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಪದಾಧಿಕಾರಿಗಳು ಪ್ರತಿ ಜಿಲ್ಲೆಯಲ್ಲಿ ಸಕ್ರಿಯರಾಗಿ ಮಾಹಿತಿ ಸಂಗ್ರಹಿಸಿ ಕೆಪಿಸಿಸಿಗೆ ವರದಿ ನೀಡಬೇಕು. ನಾವು ಈ ಮಾಹಿತಿಯನ್ನು ವರಿಷ್ಠರಿಗೆ ರವಾನೆ ಮಾಡಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಸಮರ್ಪಕವಾಗಿ ನಡೆದಿಲ್ಲ.  ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಈಗ ಸದಸ್ಯತ್ವ ನೋಂದಣಿ ಜವಾಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಎಲ್ಲರೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ಸಲಹೆ ನೀಡಿದರು.

ರಮೇಶ್ ವಿರುದ್ಧ ಆಕ್ರೋಶ: ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಪಿ. ರಮೇಶ್ ಅವರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಯಿತು. ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ಸೋಲಿಗೆ ಅವರು  ಬೆಂಬಲ ನೀಡಿದ್ದಾರೆ. ಹೀಗಾಗಿ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂಬ ಆಗ್ರಹ ವ್ಯಕ್ತವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT