ಕೆಪಿಸಿಸಿ ಸಭೆಯಲ್ಲಿ ಅಧ್ಯಕ್ಷ ಜಿ.ಪರಮೇಶ್ವರ 
ರಾಜಕೀಯ

ಬರ: ಹೈಕಮಾಂಡ್‍ಗೆ "ಕೈ" ವರದಿ

ಬರ ಪರಿಸ್ಥಿತಿ ಬಗ್ಗೆ ಎಐಸಿಸಿಗೆ ವರದಿ ನೀಡಲು ಸೋಮವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು: ಬರ ಪರಿಸ್ಥಿತಿ ಬಗ್ಗೆ ಎಐಸಿಸಿಗೆ ವರದಿ ನೀಡಲು ಸೋಮವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿಪರಮೇಶ್ವರ ಅವರು ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವರದಿಕೊಡುವಂತೆ ಸೂಚಿಸಿದ್ದಾರೆ. ಲೋಕಸಭಾ ಕಲಾಪದಲ್ಲಿ  ಅವರುಈ ವಿಚಾರ ಪ್ರಸ್ತಾಪ ಮಾಡಿ ಕೇಂದ್ರದ ಗಮನ ಸೆಳೆಯಲಿದ್ದಾರೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಪದಾಧಿಕಾರಿಗಳು ಪ್ರತಿ ಜಿಲ್ಲೆಯಲ್ಲಿ ಸಕ್ರಿಯರಾಗಿ ಮಾಹಿತಿ ಸಂಗ್ರಹಿಸಿ ಕೆಪಿಸಿಸಿಗೆ ವರದಿ ನೀಡಬೇಕು. ನಾವು ಈ ಮಾಹಿತಿಯನ್ನು ವರಿಷ್ಠರಿಗೆ ರವಾನೆ ಮಾಡಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಸಮರ್ಪಕವಾಗಿ ನಡೆದಿಲ್ಲ.  ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಈಗ ಸದಸ್ಯತ್ವ ನೋಂದಣಿ ಜವಾಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಎಲ್ಲರೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ಸಲಹೆ ನೀಡಿದರು.

ರಮೇಶ್ ವಿರುದ್ಧ ಆಕ್ರೋಶ: ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಪಿ. ರಮೇಶ್ ಅವರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಯಿತು. ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ಸೋಲಿಗೆ ಅವರು  ಬೆಂಬಲ ನೀಡಿದ್ದಾರೆ. ಹೀಗಾಗಿ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂಬ ಆಗ್ರಹ ವ್ಯಕ್ತವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ