ಎಂ.ವೀರಪ್ಪ ಮೊಯ್ಲಿ 
ರಾಜಕೀಯ

ಮತ್ತೆ ರಾಜಕೀಯ ದ್ವೇಷ

ಎತ್ತಿನಹೊಳೆ ಹೋರಾಟ ಆ ಭಾಗದ ಹಿರಿಯ ರಾಜಕಾರಣಿಗಳಾದ ಬಿ. ಜನಾರ್ದನ ಪೂಜಾರಿ ಮತ್ತು ಎಂ.ವೀರಪ್ಪ ಮೊಯ್ಲಿ ಅವರ ಹಳೆ ರಾಜಕೀಯ ದ್ವೇಷಕ್ಕೆ ...

ಚಿಕ್ಕಬಳ್ಳಾಪುರ: ಎತ್ತಿನಹೊಳೆ ಹೋರಾಟ ಆ ಭಾಗದ ಹಿರಿಯ ರಾಜಕಾರಣಿಗಳಾದ ಬಿ. ಜನಾರ್ದನ ಪೂಜಾರಿ ಮತ್ತು ಎಂ.ವೀರಪ್ಪ ಮೊಯ್ಲಿ ಅವರ ಹಳೆ ರಾಜಕೀಯ ದ್ವೇಷಕ್ಕೆ ಮತ್ತೆ ಜೀವ ತುಂಬಿದೆ. ಸಂಸದ ಎಂ.ವೀರಪ್ಪ ಮೊಯ್ಲಿ ಅವರು, ಕರಾವಳಿ ಹೋರಾಟ ರಾಜಕೀಯ ಪ್ರೇರಿತ ಎಂದು ಟೀಕಿಸಿದರು. ಅಲ್ಲದೆ ತಾವು ಹೋರಾಟಗಾರರ ಕ್ಷಮೆ ಕೋರುವಂತೆ ಆಗ್ರಹಿಸಿದ್ದ ಮಾಜಿ ಸಂಸದ ಬಿ.ಜನಾರ್ದನ ಪೂಜಾರಿ ವಿರುದ್ಧವೂ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತತ ಎರಡನೇ ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಮೊಯ್ಲಿ ಮೂಲತಃ ಉಡುಪಿ ಜಿಲ್ಲೆ ಕಾರ್ಕಳದವರು.
ಇಬ್ಬರೂ ನಾಯಕರು ಒಂದೇ ಪಕ್ಷದವರು. `ಎತ್ತಿನಹೊಳೆ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಜನಾರ್ದನ ಪೂಜಾರಿ ಅವರನ್ನು ರಾಜಕೀಯಕ್ಕೆ ಕರೆ ತಂದಿದ್ದು, ಸಂಸದರನ್ನು, ಸಚಿವರನ್ನಾಗಿ ಮಾಡಿದ್ದು ನಾನು. ಈಗ ಸ್ವಾರ್ಥ ರಾಜಕೀಯಕ್ಕಾಗಿ ನನ್ನ ವಿರುದ್ಧ ಕರಾವಳಿ ಜನರನ್ನು ಎತ್ತಿಕಟ್ಟುವ ಹುನ್ನಾರ ನಡೆಸುತ್ತಿರುವುದು ಸರಿಯಲ್ಲ' ಎಂದು ಮೊಯ್ಲಿ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು. ಬಯಲು ಸೀಮೆ ಜಿಲ್ಲೆಗಳಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ, ಕರಾವಳಿ ಯಲ್ಲಿ ವ್ಯರ್ಥವಾಗಿ ಹರಿದು ಸಮುದ್ರ ಸೇರುವ ನೀರನ್ನು ನೀಡುವ ಯೋಜಗೆ ರಾಜಕೀಯ ಪ್ರೇರಿತವಾಗಿ ವಿರೋಧಿಸುತ್ತಿರುವುದು  ಅಮಾನವೀಯ ಎಂದರು. ಎತ್ತಿನಹೊಳೆ ಯೋಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ, ಹೋರಾಟ ಗಳು ರಾಜಕೀಯ ಪ್ರೇರಿತ. ಯೋಜನೆ ನಿಲ್ಲುವುದಿಲ್ಲ. ರಾಜ್ಯ ಸರ್ಕಾರ  ಎತ್ತಿನ ಹೊಳೆ ಯೋಜನೆಯನ್ನು ಎರಡು ವರ್ಷದಲ್ಲಿ ಪೂರ್ಣಗೊಳಿಸಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT