ಮಾಜಿ ಕಾಂಗ್ರೆಸ್ ನಾಯಕ ಹಿಮಂತ 
ರಾಜಕೀಯ

ರಾಹುಲ್ ಗಾಂಧಿಗೆ ಅಮೇಥಿಯಲ್ಲೇ ಅಭದ್ರತೆ ಕಾಡುತ್ತಿದೆ: ಮಾಜಿ ಕಾಂಗ್ರೆಸ್ ನಾಯಕ ಹಿಮಂತ

ರಾಹುಲ್ ಗಾಂಧಿ ಬಲವಾದ, ನಿರ್ಣಾಯಕ ನಾಯಕ ಎಂದು ನಟಿಸುತ್ತಿದ್ದಾರೆ. ಅವರಿಗೆ ಅಮೇಥಿಯಲ್ಲೇ ಅಭದ್ರತೆ ಕಾಡುತ್ತಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ...

ಗುವಾಹಟಿ: ಕಾಂಗ್ರೆಸ್ ನಲ್ಲಿ ಕುಟುಂಬ ಕೇಂದ್ರಿತ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿಸಿ ಪಕ್ಷ ತೊರೆದಿದ್ದ ಅಸ್ಸಾಂ ಮಾಜಿ ಸಚಿವ ಹಿಮಂತ ಬಿಸ್ವ ಶರ್ಮ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರನ್ನು ವಜಾಗೊಳಿಸುವುದಕ್ಕಾಗಿ ಬೇಡಿಕೆ ಮುಂದಿಟ್ಟಾಗ ಮುಖ್ಯಮಂತ್ರಿಯನ್ನು ಬದಲಾಯಿಸುವುದು ತಮ್ಮ ವಿಶೇಷಾಧಿಕಾರ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡುವ ಅಧಿಕಾರ ಶಾಸಕರಿಗೆ ಇಲ್ಲವೇ ಎಂದು ಹಿಮಂತ ಬಿಸ್ವ ಶರ್ಮ ಪ್ರಶ್ನಿಸಿದ್ದಾರೆ. ಶಾಸಕರಿಗೆ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಅಧಿಕಾರವಿದ್ದರೆ  ಮುಖ್ಯಮಂತ್ರಿ ಬದಲಾವಣೆ ಬಗ್ಗೆ ರಾಹುಲ್ ಗಾಂಧಿ ತೀರ್ಮಾನ ಹೇಗೆ ಅಂತಿಮವಾಗುತ್ತದೆ ಎಂದು ಹಿಮಂತ ಕೇಳಿದ್ದಾರೆ.

ರಾಹುಲ್ ಗಾಂಧಿ ಬಲವಾದ, ನಿರ್ಣಾಯಕ ನಾಯಕ ಎಂದು ನಟಿಸುತ್ತಿದ್ದಾರೆ. ಅವರಿಗೆ ಅಮೇಥಿಯಲ್ಲೇ ಅಭದ್ರತೆ ಕಾಡುತ್ತಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ ಎಂದು ಹಿಮಂತ ಬಿಸ್ವ ಶರ್ಮ ವಾಗ್ದಾಳಿ ನಡೆಸಿದ್ದಾರೆ. ಅಸ್ಸಾಂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶರ್ಮ, ಕಾಂಗ್ರೆಸ್ ನಲ್ಲಿರುವ ಕುಟುಂಬ ರಾಜಕಾರಣದಿಂದ ಬೇಸತ್ತು ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT