ಮಾಜಿ ಕಾಂಗ್ರೆಸ್ ನಾಯಕ ಹಿಮಂತ 
ರಾಜಕೀಯ

ರಾಹುಲ್ ಗಾಂಧಿಗೆ ಅಮೇಥಿಯಲ್ಲೇ ಅಭದ್ರತೆ ಕಾಡುತ್ತಿದೆ: ಮಾಜಿ ಕಾಂಗ್ರೆಸ್ ನಾಯಕ ಹಿಮಂತ

ರಾಹುಲ್ ಗಾಂಧಿ ಬಲವಾದ, ನಿರ್ಣಾಯಕ ನಾಯಕ ಎಂದು ನಟಿಸುತ್ತಿದ್ದಾರೆ. ಅವರಿಗೆ ಅಮೇಥಿಯಲ್ಲೇ ಅಭದ್ರತೆ ಕಾಡುತ್ತಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ...

ಗುವಾಹಟಿ: ಕಾಂಗ್ರೆಸ್ ನಲ್ಲಿ ಕುಟುಂಬ ಕೇಂದ್ರಿತ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿಸಿ ಪಕ್ಷ ತೊರೆದಿದ್ದ ಅಸ್ಸಾಂ ಮಾಜಿ ಸಚಿವ ಹಿಮಂತ ಬಿಸ್ವ ಶರ್ಮ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರನ್ನು ವಜಾಗೊಳಿಸುವುದಕ್ಕಾಗಿ ಬೇಡಿಕೆ ಮುಂದಿಟ್ಟಾಗ ಮುಖ್ಯಮಂತ್ರಿಯನ್ನು ಬದಲಾಯಿಸುವುದು ತಮ್ಮ ವಿಶೇಷಾಧಿಕಾರ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡುವ ಅಧಿಕಾರ ಶಾಸಕರಿಗೆ ಇಲ್ಲವೇ ಎಂದು ಹಿಮಂತ ಬಿಸ್ವ ಶರ್ಮ ಪ್ರಶ್ನಿಸಿದ್ದಾರೆ. ಶಾಸಕರಿಗೆ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಅಧಿಕಾರವಿದ್ದರೆ  ಮುಖ್ಯಮಂತ್ರಿ ಬದಲಾವಣೆ ಬಗ್ಗೆ ರಾಹುಲ್ ಗಾಂಧಿ ತೀರ್ಮಾನ ಹೇಗೆ ಅಂತಿಮವಾಗುತ್ತದೆ ಎಂದು ಹಿಮಂತ ಕೇಳಿದ್ದಾರೆ.

ರಾಹುಲ್ ಗಾಂಧಿ ಬಲವಾದ, ನಿರ್ಣಾಯಕ ನಾಯಕ ಎಂದು ನಟಿಸುತ್ತಿದ್ದಾರೆ. ಅವರಿಗೆ ಅಮೇಥಿಯಲ್ಲೇ ಅಭದ್ರತೆ ಕಾಡುತ್ತಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ ಎಂದು ಹಿಮಂತ ಬಿಸ್ವ ಶರ್ಮ ವಾಗ್ದಾಳಿ ನಡೆಸಿದ್ದಾರೆ. ಅಸ್ಸಾಂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶರ್ಮ, ಕಾಂಗ್ರೆಸ್ ನಲ್ಲಿರುವ ಕುಟುಂಬ ರಾಜಕಾರಣದಿಂದ ಬೇಸತ್ತು ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT