ಎಚ್.ವಿಶ್ವನಾಥ್ 
ರಾಜಕೀಯ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ರನ್ನು ಬದಲಾಯಿಸಿ: ವಿಶ್ವನಾಥ್

ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಬದಲಾಯಿಸಬೇಕು ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ...

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಬದಲಾಯಿಸಬೇಕು ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ  ಎಚ್.ವಿಶ್ವನಾಥ್ ಮಂಗಳವಾರ ಒತ್ತಾಯಿಸಿದ್ದಾರೆ. 
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ದಿಗ್ವಿಜಯ್ ಸಿಂಗ್ ಅವರು ರಾಜ್ಯಕ್ಕೆ ಬರ್ತಾರೆ.. ಹೋಗ್ತಾರೆ. ಅವರು ಸರ್ಕಾರವನ್ನು ಯಾವತ್ತೂ ವಿಮರ್ಶೆಗೆ ಒಳಪಡಿಸಿದವರಲ್ಲ. ಹೀಗಾಗಿ ಅವರನ್ನು ಬದಲಾವಣೆ ಮಾಡಬೇಕು ಎಂದರು. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಿಯಾಗಿ ಕೆಲಸ ಮಾಡದ ಅಸಮರ್ಥ ಸಚಿವರನ್ನು ತಮ್ಮ ಸಂಪುಟದಿಂದ ಕೈಬಿಡಬೇಕು ಎಂದು ಸಹ ವಿಶ್ವನಾಥ್ ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಅವರು ಸಹ ತಾಳ್ಮೆಯಿಂದ ಆಲಿಸುವ ಗುಣ ಬೆಳೆಸಿಕೊಳ್ಳಲಿ ಎಂದ ಮಾಜಿ ಸಂಸದ, ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ವಿಚಾರದಲ್ಲಿ ಸಿದ್ದರಾಮಯ್ಯ ಅವರು ಹಿರಿಯರ ಮಾತು ಕೇಳಬೇಕು ಎಂದರು. ಎಸಿಬಿ ರಚನೆ ಬಗ್ಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿರೋಧ ವ್ಯಕ್ತಪಡಿಸಿದ್ದರು.
ಎಸ್.ಎಂ.ಕೃಷ್ಣ ಹೇಳಿದ ಮಾತಿಗೆ ಅರ್ಥ ಇರುತ್ತದೆ. ಮಾತನ್ನು ಕೇಳುವ ತಾಳ್ಮೆಯನ್ನು ಸಿದ್ದರಾಮಯ್ಯ ಇಟ್ಟುಕೊಳ್ಳಬೇಕು ಎಂದು ವಿಶ್ವನಾಥ್ ಸಲಹೆ ನೀಡಿದರು. ರಾಜ್ಯದಲ್ಲಿ ಗುಲಾಂ ನಬಿ ಅಜಾದ್ ಅವರಂತವರನ್ನು ಉಸ್ತುವಾರಿಯನ್ನಾಗಿ ನೋಡಿದ್ದೇವೆ. ಆದರೆ ದಿಗ್ವಿಜಯ್ ಸಿಂಗ್ ಬಂದು ಹೋಗುವುದಷ್ಟೇ ಕೆಲಸವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT