ಎಚ್.ವಿಶ್ವನಾಥ್ 
ರಾಜಕೀಯ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ರನ್ನು ಬದಲಾಯಿಸಿ: ವಿಶ್ವನಾಥ್

ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಬದಲಾಯಿಸಬೇಕು ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ...

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಬದಲಾಯಿಸಬೇಕು ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ  ಎಚ್.ವಿಶ್ವನಾಥ್ ಮಂಗಳವಾರ ಒತ್ತಾಯಿಸಿದ್ದಾರೆ. 
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ದಿಗ್ವಿಜಯ್ ಸಿಂಗ್ ಅವರು ರಾಜ್ಯಕ್ಕೆ ಬರ್ತಾರೆ.. ಹೋಗ್ತಾರೆ. ಅವರು ಸರ್ಕಾರವನ್ನು ಯಾವತ್ತೂ ವಿಮರ್ಶೆಗೆ ಒಳಪಡಿಸಿದವರಲ್ಲ. ಹೀಗಾಗಿ ಅವರನ್ನು ಬದಲಾವಣೆ ಮಾಡಬೇಕು ಎಂದರು. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಿಯಾಗಿ ಕೆಲಸ ಮಾಡದ ಅಸಮರ್ಥ ಸಚಿವರನ್ನು ತಮ್ಮ ಸಂಪುಟದಿಂದ ಕೈಬಿಡಬೇಕು ಎಂದು ಸಹ ವಿಶ್ವನಾಥ್ ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಅವರು ಸಹ ತಾಳ್ಮೆಯಿಂದ ಆಲಿಸುವ ಗುಣ ಬೆಳೆಸಿಕೊಳ್ಳಲಿ ಎಂದ ಮಾಜಿ ಸಂಸದ, ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ವಿಚಾರದಲ್ಲಿ ಸಿದ್ದರಾಮಯ್ಯ ಅವರು ಹಿರಿಯರ ಮಾತು ಕೇಳಬೇಕು ಎಂದರು. ಎಸಿಬಿ ರಚನೆ ಬಗ್ಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿರೋಧ ವ್ಯಕ್ತಪಡಿಸಿದ್ದರು.
ಎಸ್.ಎಂ.ಕೃಷ್ಣ ಹೇಳಿದ ಮಾತಿಗೆ ಅರ್ಥ ಇರುತ್ತದೆ. ಮಾತನ್ನು ಕೇಳುವ ತಾಳ್ಮೆಯನ್ನು ಸಿದ್ದರಾಮಯ್ಯ ಇಟ್ಟುಕೊಳ್ಳಬೇಕು ಎಂದು ವಿಶ್ವನಾಥ್ ಸಲಹೆ ನೀಡಿದರು. ರಾಜ್ಯದಲ್ಲಿ ಗುಲಾಂ ನಬಿ ಅಜಾದ್ ಅವರಂತವರನ್ನು ಉಸ್ತುವಾರಿಯನ್ನಾಗಿ ನೋಡಿದ್ದೇವೆ. ಆದರೆ ದಿಗ್ವಿಜಯ್ ಸಿಂಗ್ ಬಂದು ಹೋಗುವುದಷ್ಟೇ ಕೆಲಸವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT