ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಗೈರಾದ ಶಾಸಕರಿಗೆ ಅನಾರೋಗ್ಯ: ಕುಮಾರ ಸ್ವಾಮಿ ವ್ಯಂಗ್ಯ

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಶನಿವಾರ ಮೈಸೂರಿನ ಹೊರವಲಯದ ರೆಸಾರ್ಟ್‌ವೊಂದರಲ್ಲಿ ಶಾಸಕಾಂಗ ಸಭೆ ನಡೆಸಿದರು....

ಮೈಸೂರು: ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಜೆಡಿಎಸ್‌ನ ಕೆಲವು ಶಾಸಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಭಯಗೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಶನಿವಾರ ಮೈಸೂರಿನ ಹೊರವಲಯದ ರೆಸಾರ್ಟ್‌ವೊಂದರಲ್ಲಿ ಶಾಸಕಾಂಗ ಸಭೆ ನಡೆಸಿದರು.

ಆದರೆ ಈ ಸಭೆಗೆ ಕೆಲವು ಶಾಸಕರು ಗೈರು ಹಾಜರಾಗಿರುವುದು ಪಕ್ಷದಲ್ಲಿರುವ ಭಿನ್ನಮತವನ್ನು ಬಹಿರಂಗಗೊಳಿಸಿದೆ. ಸಭೆಯಲ್ಲಿ ಶಾಸಕರಾದ ಜಮೀರ್ ಅಹಮದ್, ಚೆಲುವರಾಯಸ್ವಾಮಿ ಹಾಗೂ ಅಖಂಡ ಶ್ರೀನಿವಾಸ್ ಮೂರ್ತಿ ಕಾಣದೆ ಇದ್ದದ್ದು ಕುತೂಹಲ ಮೂಡಿಸಿದೆ. ಶಾಸಕರ ಗೈರು ಹಾಜರಿಯನ್ನು ಸಮರ್ಥಿಸಿಕೊಂಡಿರುವ ಕುಮಾರಸ್ವಾಮಿ ಅವರು, ಪೂರ್ವಾನುಮತಿ ಪಡೆದು ಗೈರು ಹಾಜರಾಗಿರುವುದಾಗಿ ಹೇಳಿದ್ದಾರೆ.

ಜಮೀರ್ ಅಹಮದ್, ಚೆಲುವರಾಯಸ್ವಾಮಿ, ಅಖಂಡ ಶ್ರೀನಿವಾಸ್‌ಮೂರ್ತಿ ಅವರ ಗೈರುಹಾಜರಿ ಬಗ್ಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ  ಒಬ್ಬರಿಗೆ ಪೈಲ್ಸ್ ಆಗಿದ್ದರೆ, ಇನ್ನೊಬ್ಬರಿಗೆ 104 ಡಿಗ್ರಿ ಜ್ವರ... ಮಗದೊಬ್ಬರಿಗೆ ಆರೋಗ್ಯ ಸರಿಯಿಲ್ಲ ಎಂದು ಹೇಳಿದ್ದಾರೆ.

ಸಭೆಗೆ ಒಟ್ಟು 10 ಮಂದಿ ಗೈರು ಹಾಜರಾಗಿದ್ದು ಅವರ ಪೈಕಿ ಏಳು ಮಂದಿ ಅನುಮತಿ ಪಡೆದಿದ್ದರು, ಆದರೆ ಮೂವರು ಯಾವುದೇ ಮಾಹಿತಿ ನೀಡಿಲ್ಲ. ಈ ಮೂವರು ಶಾಸಕರು ಜೆಡಿಎಸ್‌ನಿಂದ ಹೊರ ಹೋಗುವುದು ಖಚಿತ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT