ಸಂಗ್ರಹ ಚಿತ್ರ 
ರಾಜಕೀಯ

ಸುಗಮ ಕಲಾಪ: ನಿಯಮಗಳಿಗೆ ತಿದ್ದುಪಡಿ ತರಲು ಜಂಟಿ ಸದನ ಸಮಿತಿ ನಿರ್ಧಾರ

ವಿಧಾನ ಮಂಡಲಗಳ ಅಧಿವೇಶನದಲ್ಲಿ ಸುಗಮ ಕಲಾಪ ನಡೆಸಲು ಅನುವಾಗುವಂತೆ ನಿಯಮಗಳಿಗೆ ತಿದ್ದುಪಡಿ ತರಲು ಜಂಟಿ ಸದನ ಸಮಿತಿ ನಿರ್ಧರಿಸಿದೆ.

ಬೆಂಗಳೂರು: ವಿಧಾನ ಮಂಡಲಗಳ ಅಧಿವೇಶನದಲ್ಲಿ ಸುಗಮ ಕಲಾಪ ನಡೆಸಲು ಅನುವಾಗುವಂತೆ ನಿಯಮಗಳಿಗೆ ತಿದ್ದುಪಡಿ ತರಲು ಜಂಟಿ ಸದನ ಸಮಿತಿ ನಿರ್ಧರಿಸಿದೆ.

ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಮತ್ತು ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಅಧ್ಯಕ್ಷರಾಗಿರುವ ಜಂಟಿ ಸದನ ಸಮಿತಿಯ ಮೊದಲ ಸಭೆ ನಂತರ ಮಾತನಾಡಿದ ಕೋಳಿವಾಡ, ಗಮನಸೆಳೆಯುವ ಸೂಚನೆಗಳ ಮೇಲೆ ನಡೆಯುವ ಚರ್ಚೆ ಬಳಿಕವೇ ನಿಲುವಳಿ ಸೂಚನೆ ಮಂಡಿಸಲು ಅವಕಾಶ ನೀಡಬೇಕು ಎಂಬ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕಲಾಪಕ್ಕೆ 1 ಗಂಟೆ ಮೊದಲು ನಿಲುವಳಿ ಸೂಚನೆ ಪ್ರಸ್ತಾಪಿಸಲು ಅನುಮತಿ ಕೋರಬೇಕು ಎಂಬ ನಿಯಮಕ್ಕೆ ಮಧ್ಯಾಹ್ನ 2 ರ ಬಳಿಕ ನಿಲುವಳಿ ಸೂಚನೆ ಪ್ರಸ್ತಾವನೆ ಸಲ್ಲಿಸುವುದು ಎಂಬ ಬದಲಾವಣೆ ತರಲು ನಿರ್ಧರಿಸಲಾಗಿದೆ ಎಂದರು. ನಿಯಮಗಳಿಗೆ ತಿದ್ದುಪಡಿ ಮಾಡಿದ ಬಳಿಕ ಕಲಾಪ ಆರಂಭದಲ್ಲಿ ಸಭಾಧ್ಯಕ್ಷರ ಪೀಠದ ಮುಂದೆ ಧರಣಿ ನಡೆಸಿ, ಕಲಾಪಕ್ಕೆ ಅಡ್ಡಿಪಡಿಸಲು ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ನವೆಂಬರ್‌ನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಮೊದಲ ದಿನವೇ ವರದಿ ಮಂಡಿಸಿ ಅನುಮೋದನೆ ಪಡೆಯಲಾಗುವುದು. ಈ ಅಧಿವೇಶನದಲ್ಲಿ ಹೊಸ ನಿಯಮಗಳಂತೆ ಕಲಾಪ ನಡೆಸಲಾಗುವುದು ಎಂದು ಕೋಳಿವಾಡ ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT